ಸರ್ಕಾರದಿಂದ ಸೌಲಭ್ಯ ಒದಗಿಸಲು ಪ್ರಯತ್ನ: ಪಾಟೀಲ

ಕಲಬುರಗಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರ ೨೦೨೦ರ ವರೆಗೆ ಪ್ರತಿಯೊಬ್ಬರಿಗೂ ಮನೆಯನ್ನು ಹೊಂದಿರಬೇಕೆನ್ನುವ ಸಂಕಲ್ಪ ಹೊಂದಿದ್ದು, ರಾಜ್ಯ ಸರ್ಕಾರದಿಂದ ಹಾಗೂ ಕೇಂದ್ರ ಸರ್ಕಾರದಿಂದ ನಿಮ್ಮ ಸಹಕಾರ ಸಂಘಕ್ಕೆ ಅಗತ್ಯವಾದ ಸೌಲಭ್ಯವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ದಕ್ಷಿಣ ಮತಕ್ಷೇತ್ರದ ಶಾಕಸ ಹಾಗೂ ಕೆಕೆಆ???ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.

ಅವರು ಭಾನುವಾರ ನಗರದ ಚೆಂಬರ್ ಆಫ್ ಕಾಮರ್ಸನಲ್ಲಿ ಆಯೋಜಿಸಿದ್ದ ಸರಕಾರಿ/ಅರೆ ಸರಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ದಶಮಾನೋತ್ಸವ ಹಾಗೂ ಸದಸ್ಯರ ಸಭೆಯ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿ, ಹೌಸಿಂಗ್ ಫಾರ್ ಆಲ್ ಎಂಬ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ಇದಕ್ಕಾಗಿ ೩ ರಿಂದ ೪ ಲಕ್ಷ ಸಬ್ಸಿಡಿ ಕೂಡ ನೀಡುತ್ತಿದೆ. ರಾಜ್ಯ ಸರ್ಕಾರ ಕೂಡ ಅನೇಕ ಸವಲತ್ತುಗಳನ್ನು ಮಾಡಿಕೊಂಡಿದೆ. ಇದರಿಂದ ನಿಮ್ಮ ಸಹಕಾರ ಸಂಘಕ್ಕೆ ಬೇಕಾಗುವ ಅನೂಕೂಲತೆಗಳನ್ನು ನಾನು ಮಾಡಿಕೊಡುವುದಾಗಿ ಭರಸವೆ ನೀಡಿದರು.

ರಾಜ್ಯ ಸರ್ಕಾರ ಕೊರೋನಾ ದಂತಹ ಸಂದರ್ಭದಲ್ಲಿಯೂ ಸಹ ಸರ್ಕಾರಿ ನೌಕರರ ಸಂಭಳವನ್ನು ಕಡಿತಗೊಳಿಸಿಲ್ಲ. ಹೀಗಾಗಿ ಸರ್ಕಾರಿ ನೌಕರರ ಪರವಾಗಿರುವ ನಮ್ಮ ಸರ್ಕಾರವೂ ಮುಂಬರುವ ದಿನಗಳಲ್ಲಿ ಅನೇಕ ಯೋಜನೆಗಳನ್ನು ಸರ್ಕಾರಿ ನೌಕರರ ಸಲುವಾಗಿ ತರಲಿದೆ ಎಂದರು. ಅದರಂತೆ ಕಲಬುರಗಿ ಸಿಟಿಯನ್ನು ಸ್ಮಾರ್ಟ ಸಿಟಿಯನ್ನಾಗಿಸಲು ನಮ್ಮ ಪಕ್ಷದ ಸಂಸದರು.ಶಾಸಕರು ಎಲ್ಲರು ಪಣ ತೊಟ್ಟಿದ್ದೇವೆ ಎಂದರು.

ವಿಧಾನ ಪರಿಷತ ಸದಸ್ಯ ಶಶೀಲ ನಮೋಶಿ ಮಾತನಾಡಿ, ಕಡಿಮೆ ಬೆಲೆಯನ್ನು ನಿವೇಶನ ನೀಡುವ ಕೆಲಸ ಹಿಂದೆ ಬಹಳವಿತ್ತು. ಈಗಿನ ಸಂದರ್ಭದಲ್ಲಿ ಅದು ಕಷ್ಟದ ಕೆಲಸವಾಗಿದೆ. ಹೀಗಾಗಿ ನಿಮ್ಮ ಎಲ್ಲಾ ಸದಸ್ಯರ ಬಳಿ ನನ್ನ ವಿನಂತಿಯಾಗಿದೆ. ಎಲ್ಲರಿಗೂ ನಿವೇಶನ ಕೊಡುವ ಕೆಲಸವನ್ನು ನಿಮ್ಮಿಂದ ಆಗಲಿ ಎಂದರು. ಇದಕ್ಕೆ ಪೂರಕವಾಗಿ ನಾವು ನಿಮಗೆ ಸಹಕಾರ ನೀಡಲಿದ್ದೇವೆ ಎಂದರು. ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್ ಮಾತನಾಡಿ, ಅಧಿಕಾರದ ಶಕ್ತಿ ಮೇಲೆ ಯೋಜನೆಯನ್ನು ಹಾಕಿಕೊಂಡು ಕೆಲಸ ಮಾಡಬೇಕಂದರು. ಸರ್ಕಾರದಿಂದ ೧೦% ನಿವೇಶನ ನಗರಾಭಿವೃದ್ಧಿ ಪ್ರಾಧಿಕಾರದಿಂದ ನೀಡಲು ಆದೇಶವಿದೆ. ಹೀಗಾಗಿ ನಿಮ್ಮ ಸಹಕಾರ ಸಂಘಕ್ಕೆ ಬೇಕಾಗುವ ಎಲ್ಲ ಸವಲತ್ತು ನೀಡಲು ನಾನು ಸಿದ್ದನಿದ್ದೇನೆ ಎಂದು ಎಂದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬಿ.ಎಸ್.ದೇಸಾಯಿ ಮಾತನಾಡಿದರು. ಚಂದ್ರಾಮ ಹುಬ್ಬಳಿ, ಎಂ.ಡಿ.ಕಾಚಾಪುರ, ಚಂದ್ರಕಾಂತ ಅಷ್ಟಗಿ, ನಾಗೇಂದ್ರ ಪಾನಗಾಂವ್, ಬಾಲಚಂದ್ರ ನೆಲ್ಲೂರ್, ಚಾಂದಕವಟೆ, ಚಂದ್ರಕಾಂತ ಆರ್, ಮಹ್ಮದ್ ಖಾನ್, ಸತೀಶ ಜೋಶಿ, ತುಕಾರಾಮ ಕೋಂಗೆ ಸೇರಿದಂತೆ ಅನೇಕ ಸದಸ್ಯರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420