ಬಿಸಿ ಬಿಸಿ ಸುದ್ದಿ

ಹರಿದು ಚಿಂದಿಯಾಗಿರುವ ಹೊನಗುಂಟಾ ಗ್ರಾಮದ ರಸ್ತೆ

ಶಹಾಬಾದ:ಹರಿದು ಚಿಂದಿಯಾಗಿರುವ ರಸ್ತೆ, ಎಲ್ಲಿ ನೋಡಿದರಲ್ಲಿ ತಗ್ಗು ಗುಂಡಿಗಳು, ಇಲ್ಲಿನ ಸಂಚರಿಸುವ ಜನರಿಗೆ ಎಲ್ಲಿಲ್ಲದ ಸಂಕಟ.ಇದು ನಗರದ ಸಮೀಪದ ನಿಜಾಮ ಬಜಾರದಿಂದ ಹೊನಗುಂಟಾ ಗ್ರಾಮಕ್ಕೆ ಹೋಗುವ ರಸ್ತೆಯ ದುಸ್ಥಿತಿ.

ಇಲ್ಲಿನ ರಸ್ತೆಯಿಂದ ಹೊರಡುವ ಜನರಿಗೆ ಹದಗೆಟ್ಟ ರಸ್ತೆಗಳ ದರ್ಶನ ಆಗದೇ ಇರಲಾರದು.ಹದಗೆಟ್ಟ ಇಲ್ಲಿನ ರಸ್ತೆಗಳು ವರ್ಷದ ಎಲ್ಲಾ ದಿನಗಳಲ್ಲಿ ಇದೇ ಸ್ಥಿತಿಯಲ್ಲಿರುತ್ತವೆ. ಈ ರಸ್ತೆಯ ದುರಸ್ತಿ ಯಾವಾಗ? ಎಂಬುದೆ ನರಕಯಾತನೇ ಅನುಭವಿಸುತ್ತಿರುವ ಪ್ರಯಾಣಿಕರ ಯಕ್ಷ ಪ್ರಶ್ನೆಯಾಗಿದೆ.

ಜನಸ್ನೇಹಿಯಾಗಿರಬೇಕಾದ ರಸ್ತೆಗಳು ಮಾತ್ರ ಹದಗೆಟ್ಟಿವೆ. ರಸ್ತೆಗಳಿಗಾಗಿ ಸರಕಾರ ಕೊಟ್ಯಾಂತರ ರೂಪಾಯಿಗಳು ಖರ್ಚು ಮಾಡುವ ಹಣ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಈ ರಸ್ತೆಯ ಮೂಲಕ ಪ್ರತಿನಿತ್ಯ ಸಾವಿರಾರು ವಾಹನಗಳು ಚಲಿಸುತ್ತವೆ. ಅದರೊಳಗೆ ಪ್ರಯಾಣಿಸುವ ಪ್ರಯಾಣಿಕರು ಜಟಕಾ ಬಂಡಿಯೊಳಗೆ ಕುಂತ ಅನುಭವ ಆಗದೇ ಇರಲಾರದು. ಜೀವ ಕೈಯಲ್ಲಿ ಹಿಡಿದುಕೊಂಡು ಇಲ್ಲಿನ ಜನರು ಪ್ರಯಾಣ ಬಯಸಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದರೆ ಇಲ್ಲಿನ ರಸ್ತೆಗಳಲ್ಲಿ ತೆಗ್ಗು ಗುಂಡಿಗಳನ್ನು ಎಣಿಸಲು ಸಾಧ್ಯವಿಲ್ಲಷ್ಟರ ಮಟ್ಟಿಗೆ ಹಾಳಾಗಿದೆ.

ಸುಮಾರು 25 ರಿಂದ 40 ಟನ್ ಭಾರ ಹೊತ್ತ ಸಿಮೆಂಟ ಹಾಗೂ ಫರ್ಸಿ ಲಾರಿಗಳಿಂದ ರಸ್ತೆ ಸಂಪೂರ್ಣ ಹಾಳಾಗಿ ಹೋಗಿದೆ. ಅಲ್ಲದೆ ಒಬ್ಬರಿಗೊಬ್ಬರೂ ಗುರುತು ಸಿಗದ ಹಾಗೇ ಮುಖ, ಮೈಗೆ ಭಾರಿ ಪ್ರಮಾಣದ ಧೂಳು ಹತ್ತುವುದರಿಂದ ಜನರು ಅನೇಕ ತೊಂದರೆಗಳಿಗೆ ಒಳಗಾಗುತ್ತಿದ್ದಾರೆ. ಕಳಪೆ ಡಾಂಬರೀಕರಣದಿಂದ ರಸ್ತೆ ಕಿತ್ತು ಹೋಗಿ ದೊಡ್ಡ ದೊಡ್ಡ ತಗ್ಗು ದಿನ್ನೆಗಳು ನಿರ್ಮಾಣವಾಗಿದೆ. ಇದರಿಂದ ಜನರು ರಸ್ತೆಗಿಳಿಯಲು ತೊಂದರೆ ಪಡಬೇಕಾಗಿದೆ. ವಾಹನ ಸವಾರರು ಈ ಹದಗೆಟ್ಟ ರಸ್ತೆಯ ಸುಧಾರಣೆಗೆ ಮುಂದಾಗದ ಲೋಕೋಪಯೋಗಿ ಇಲಾಖೆ ಹಾಗೂ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಸದ್ಯ ಈ ರಸ್ತೆಯಿಂದ ಹೋಗಬೇಕಾದರೆ ಉಯ್ಯಾಲೆ ಆಡಿದಂತಾಗುತ್ತದೆ. ಸುಲಭ ಹೆರಿಗೆಗೆ ಇಲ್ಲಿಗೆ ಬರಬೇಕಷ್ಟೆ ಎಂದು ಇಲ್ಲಿನ ಜನರು ಈ ರಸ್ತೆಯ ಕುರಿತು ವ್ಯಂಗವಾಗಿ ಮಾತನಾಡುತ್ತಾರೆ.
ಇದೇ ರಸ್ತೆಯ ಮೂಲಕ ಹೊನಗುಂಟಾ ಗ್ರಾಮದ ವಿವಿಧ ಪಕ್ಷದ ಮುಖಂಡರು ಅನೇಕ ಬಾರಿ ತಿರುಗಾಡಿದರೂ ಬಹುಶ: ಅವರಿಗೆ ಇದರ ಅನುಭವ ಬಂದಿರಲಕ್ಕಿಲ್ಲ. ಇವರು ಇದ್ದು ಏನು ಪ್ರಯೋಜನವಿಲ್ಲ ಎಂದು ಪ್ರಯಾಣಿಕರ ಅಂಬೋಣವಾಗಿದೆ.

ಇಲ್ಲಿನ ರಸ್ತೆಗಳು ಸಂಪೂರ್ಣ ಹದಗೆಟ್ಟು ಹೋದರೂ ಸಂಬಂಧಿಸಿದ ಅಧಿಕಾರಿಗಳು ಈ ಕಡೆ ಗಮನಹರಿಸುತ್ತಿಲ್ಲ.ಜನರ ಗೋಳು ಕೇಳುತ್ತಿಲ್ಲ. ಈ ರಸ್ತೆಗಳ ಶಾಶ್ವತ ಸುಧಾರಣೆಗೆ ಸಂಬಂಧಿಸಿದ ಇಲಾಖೆ ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಕ್ರಮ ಕೈಗೊಳ್ಳುವ ಮೂಲಕ ಪ್ರಯಾಣಿಕರ ನರಕಯಾತನೆ ತಪ್ಪಿಸಬೇಕಾಗಿದೆ– ವಿಶ್ವರಾಜ ಫೀರೋಜಬಾದ ಅಧ್ಯಕ್ಷರು ಕರವೇ ಹೊನಗುಂಟಾ, ಸಂಗಣ್ಣ ಇಜೇರಿ ಬಿಜೆಪಿ ಮುಖಂಡರು ಹೊನಗುಂಟಾ.

emedia line

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

10 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

17 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago