ಸಾವಿತ್ರಿಬಾಯಿ ಪಾಟೀಲ,ಶಿವಪುತ್ರ ಕರಣಿಕ್, ಸಂತೋಷ ಸಲಗರ್, ಸುಲೋಚನಾ ಜಾಧವ ಆಯ್ಕೆ

ಶಹಾಬಾದ:ತಾಲೂಕಿನಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯಲ್ಲಿ ಸಾವಿತ್ರಿಬಾಯಿ ಪಾಟೀಲ,ಶಿವಪುತ್ರ ಕರಣಿಕ್, ಸಂತೋಷ ಸಲಗರ್, ಸುಲೋಚನಾ ಜಾಧವ ಅವರು ತಾಲೂಕಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಒಟ್ಟು 198 ಮತದಾರರಲ್ಲಿ, 188 ಮತದಾರರು ತಮ್ಮ ಮತ ಚಲಾಯಿಸುವ ಮೂಲಕ 95.54 ಪ್ರತಿಶತ ಮತ ಚಲಾವಣೆಯಾದವು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯ 8 ಅಭ್ಯರ್ಥಿಗಳಲ್ಲಿ ಸಾವಿತ್ರಿಬಾಯಿ ಪಾಟೀಲ – 109 ಮತ, ಶಿವಪುತ್ರ ಕರಣಿಕ್-99, ಸಂತೋಷ ಸಲಗರ್-93, ಸುಲೋಚನಾ ಜಾಧವ -88 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ರಿಹಾನ ಪರವೀನ್-81, ಶಬ್ಬೀರಮೀಯಾ-80,ರುಕ್ಸಾನಾ ಬೇಗಂ-79, ಪ್ರಮೋದಕುಮಾರ-71 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ, ಮತ ಎಣಿಕೆಯ ನಂತರ ಸಾವಿತ್ರಿಬಾಯಿ ಪಾಟೀಲ,ಶಿವಪುತ್ರ ಕರಣಿಕ್, ಸಂತೋಷ ಸಲಗರ್, ಸುಲೋಚನಾ ಜಾಧವ ಆಯ್ಕೆಯಾಗಿದ್ದಾರೆ ಎಂದು ಚುನಾವಣಾವಧಿಕಾರಿ ರಮೇಶ ಥಳಂಗೆ ಮತ್ತು ಸಹಾಯಕ ಚುನಾವಣಾಧಿಕಾರಿ ಹಾಜಪ್ಪ ತಿಳಿಸಿದರು.

ವಿಜಯೋತ್ಸವ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಲ್ಕು ಜನರ ಬೆಂಬಲಿಗರು, ಶಿಕ್ಷಕರು ಹಾಗೂ ಹಿತೈಷಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

emedia line

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

9 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420