ಉದ್ದಿಮೆ ಪರವಾನಗಿ ಹೆಸರಿನಲ್ಲಿ ಕೋಟ್ಯಂತರ ಲೂಟಿ: ಆನಂದ್ ವಾಸುದೇವನ್ ಆಗ್ರಹ

0
45

ಬೆಂಗಳೂರು; ಉದ್ದಿಮೆ ಪರವಾನಗಿ ನೀಡುವ ನೆಪದಲ್ಲಿ ನಡೆಯುತ್ತಿರುವ ಸುಲಿಗೆಯನ್ನು ತಪ್ಪಿಸಲು ಆನ್‌ಲೈನ್‌ ಮೂಲಕ ಉದ್ದಿಮೆ ಪರವಾನಗಿ ನೀಡಲಾಗುವುದು ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಆಯುಕ್ತ ಮಂಜುನಾಥ್ ಪ್ರಸಾದ್ ಅವರ ಮಾತು ಸುಳ್ಳಾಗಿದೆ. ಕೋಟ್ಯಂತರ ರೂಪಾಯಿ ಹಣವನ್ನು ಉದ್ದಿಮೆದಾರರಿಂದ ಸುಲಿಗೆ ಮಾಡಲಾಗುತ್ತಿದೆ ಎಂದು ಸಿ.ವಿ.ರಾಮನ್ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆನಂದ್ ವಾಸುದೇವನ್ ಆರೋಪಿಸಿದರು.

ಮಂಗಳವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ಮೇಲಿನ ಅಧಿಕಾರಿಗಳು ತಮ್ಮ ಕೆಳಗಿನ ಅಧಿಕಾರಿಗಳನ್ನು ರಕ್ಷಿಸುತ್ತಿದ್ದಾರೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಹಾಳುಗೆಡವಿ, ಉದ್ದಿಮೆದಾರರನ್ನು ಕಚೇರಿಗೆ ಕರೆಸಿ ನವೀಕರಣದ ಹೆಸರಿನಲ್ಲಿ ಹಣ ಕೀಳಲಾಗುತ್ತಿದೆ. ಎಲ್ಲಾ ಮಾಜಿ ಮೇಯರ್‌ಗಳು, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಮಾಜಿ ಪಾಲಿಕೆ ಸದಸ್ಯರುಗಳು ಸಹ ಈ ಜಾಲದಲ್ಲಿ ಇದ್ದಾರೆ ಎಂದರು.

Contact Your\'s Advertisement; 9902492681

ಬೆಂಗಳೂರಿನಲ್ಲಿ ಉದ್ದಿಮೆ ತೆರೆಯುವುದು ಇನ್ನು ಸುಲಭ ಎಂದು ಹೇಳಿದ್ದ ಬಿಬಿಎಂಪಿ ಹಿಂಬಾಗಿಲ ಮೂಲಕ ಉದ್ದಿಮೆದಾರರಿಂದ ಹಣ ದೋಚುತ್ತಿದ್ದು, ಪರವಾನಗಿಗೆ ನೀಡುವುದೇ ದಂದೆಯಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಕಳೆದ ಮಾರ್ಚ್‌ ತಿಂಗಳಲ್ಲಿ ಪಾಲಿಕೆ ಅಧಿಕಾರಿಗಳೇ ನಡೆಸಿದ ಸಮೀಕ್ಷೆ ಪ್ರಕಾರ, 198 ವಾರ್ಡ್‌ಗಳಲ್ಲಿ ಪರವಾನಗಿ ಪಡೆದು ಅಧಿಕೃತವಾಗಿ 50,383, ಅನಧಿಕೃತವಾಗಿ 59,130 ಉದ್ದಿಮೆಗಳು ನಡೆಯುತ್ತಿವೆ ಎಂದು ಆರೋಗ್ಯ ಅಧಿಕಾರಿಗಳು ವರದಿ ಸಲ್ಲಿಸಿದ್ದರು. ತದನಂತರ ಈ ಸಮೀಕ್ಷೆ ಸಾಕಷ್ಟು ಅನುಮಾನ ಮೂಡಿಸಿದ ಕಾರಣ ಮತ್ತೆ ಮರು ಸಮೀಕ್ಷೆ ನಡೆಸಲಾಯಿತು. ಆಗ 1.28 ಲಕ್ಷ ಅನಧಿಕೃತ, 50,150 ಅಧಿಕೃತ ಒಟ್ಟು 1,79,001 ಉದ್ದಿಮೆಗಳಿರುವುದು ಬೆಳಕಿಗೆ ಬಂದಿತ್ತು. ಅಂದಾಜಿನ ಪ್ರಕಾರ ನಗರದಲ್ಲಿ 5 ಲಕ್ಷ ಪರವಾನಗಿ ಪಡೆಯದ ಉದ್ದಿಮೆಗಳಿದ್ದು ಇವುಗಳಿಂದ ಎಲ್ಲಾ ರೀತಿಯ ಅಧಿಕಾರಿಗಳು ಕೋಟ್ಯಂತರ ರೂ ವಸೂಲಿ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗ ನೀಡುತ್ತಿರುವ ಉದ್ದಿಮೆದಾರರಿಗೆ ಕಿರುಕುಳ ತಪ್ಪಿಸಬೇಕು. ನಾಲ್ಕು ವಲಯಗಳಲ್ಲೂ ಒಂದೊಂದು ಉದ್ದಿಮೆ ಪರವಾನಗಿ ನೀಡಲು ಕಚೇರಿ ತೆರಯಬೇಕು ಹಾಗೂ ಆನ್‌ಲೈನ್‌ ವ್ಯವಸ್ಥೆ ಯನ್ನು ಗಟ್ಟಿಗೊಳಿಸಿ ಕಿರುಕುಳ ತಪ್ಪಿಸಬೇಕು, ಹಳೆಯ ದರಗಳನ್ನು ಪರಿಷ್ಕರಿಸಿ ವೈಜ್ಞಾನಿಕ ಶುಲ್ಕ ವಿಧಸಬೇಕು ಎಂದು ಬೇಡಿಕೆಗಳನ್ನು ಇಟ್ಟರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here