ರಾಯಚೂರು: ಕವಿತಾಳ ವ್ಯಾಪ್ತಿ ಪ್ರದೇಶದಲ್ಲಿ ಪಾಮನಕಲ್ಲೂರಿನ ಬಸವೇಶ್ವರ ದೇವಸ್ಥಾನದ ಹತ್ತಿರ NRBC 5A ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಕಳೆದ 27 ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟವಾಧಿ ಹೋರಾಟಕ್ಕೆ ರಾಜ್ಯ ಸರ್ಕಾರದಿಂದ ಸೂಕ್ತ ಭರವಸೆ ಸಿಗದ ಕಾರಣ ಅಮೀನಗಡ, ವಟಗಲ್, ಪಾಮನಕಲ್ಲೂರು ಹಾಗೂ ಅಂಕುಶದೊಡ್ಡಿಯ ನಾಲ್ಕು ಗ್ರಾಮದ ಜನತೆ ಸ್ವಯಂ ಪ್ರೇರಿತರಾಗಿ ಚುನಾವಣೆ ಯನ್ನು ಬಹಿಷ್ಕಾರ ಮಾಡಿ ಬೇಡಿಕೆಯನ್ನು ಈಡೇರಿಸುವಂತೆ ಆಡಳಿತ ಸರ್ಕಾರಕ್ಕೆ ಆಗ್ರಸಿದ್ದಾರೆ.
ಹೋರಾಟದ ಸ್ಥಳಕ್ಕೆ ಇಂದು ಸಂಜೆಯ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎನ.ಎಸ್. ಬೋಸರಾಜು ಭೇಟಿ ನೀಡಿ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು ಈಡೇರಿಸುವಂತೆ ಒತ್ತಡ ಹಾಕಲಾಗುತ್ತದೆ ಎಂದು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ನಂತರ ಮಾಜಿ ಶಾಸಕ ಹಂಪಯ್ಯ ನಾಯಕ, ಹೋರಾಟ ಸಮತಿಯ ಮುಖಂಡರಾದ ಬಸವರಾಜಪ್ಪಗೌಡ ಹರ್ವಾಪುರ, ನಾಗರೆಡ್ಡಪ್ಪ ದೇವರಮನಿ, ಶಿನಗಗೌಡ ವಟಗಲ್, SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿ ಸ್ವಯಂ ಪ್ರೇರಿತರಾಗಿ ಚುನಾವಣೆ ಬಹಿಷ್ಕಾರ ಮಾಡಿದ ನಾಲ್ಕು ಗ್ರಾಮದ ಜನತೆಗೆ ಕೃತಜ್ಞೆತೆ ಸಲ್ಲಿಸಿದರು.
ನಮ್ಮ ಬೇಡಿಕೆ ಈಡೇರಿಸುವ ವರೆಗೂ ನಮ್ಮಗಳ ಹೋರಾಟ ನಿರಂತರವಾಗಿರುತ್ತದೆ. ಇದೆ ರೀತಿಯಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದರೆ ನಾವು ಹೋರಾಟದ ಸ್ವರೂಪವನ್ನು ಬದಲಾಯಿಸಿಕೊಂಡು ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ದೊಟ್ಡಬಸ್ಸಪ್ಪ, ಸದಸ್ಯರಾದ ಕಿರಿಲಿಂಗಪ್ಪ ಕವಿತಾಳ, ಬಿ.ಎ ಕರೀಂ ಸಾಬ್, ಶಿವಣ್ಣ ವಕೀಲ, ಅಮರೇಗೌಡ ಅಮೀಗಡ, ದುರುಗೇಶ, ಬಸವರಾಜ, ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಮುಖ್ಯಸ್ಥರಾದ ಬಸವರಾಜ ಸಿರವಾರ, ಚನ್ನಪ್ಪ ಬೂದಿನಾಳ, ಮೌನೇಶ ದೊಡ್ಡಮನಿ, ಅಯ್ಯಣ್ಣ, ಮಂಜೂರು ಪಾಷ, ಸೇರಿ ಅಮೀನಗಡ, ಪಾಮನಕಲ್ಲೂರು, ವಟಗಲ್ ಮತ್ತು ಅಂಕುಶದೊಡ್ಡಿ ಗ್ರಾಮ ರೈತರು, ಮಹಿಳೆಯರು ಸೇರಿ ನೂರಾರು ಜನ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…