ಶರಣಬಸವೇಶ್ವರ ದೇವಾಲಯದ ಹುಂಡಿ ಒಡೆದು ಕಳ್ಳತನ

0
339

ಶಹಾಬಾದ: ನಗರದ ಪ್ರಸಿದ್ಧ ಶರಣಬಸವೇಶ್ವರ ದೇವಾಲಯದ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ಮಂಗಳವಾರದಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನಗರದ ಶರಣಬಸವೇಶ್ವರ ದೇವಾಲಯದಲ್ಲಿ ಸೋಮವಾರ ರಾತ್ರಿ ಯಾರೂ ಇಲ್ಲದನ್ನು ನೋಡಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.ಹುಂಡಿಯನ್ನು ಮಂದಿರದ ಹಿಂಭಾಗದಲ್ಲಿ ತೆಗೆದುಕೊಂಡಿ ಹೋಗಿ ಬೀಗವನ್ನು ಒಡೆದು ನೋಟನ್ನು ಮಾತ್ರ ತೆಗೆದುಕೊಂಡು, ನಾಣ್ಯಗಳನ್ನು ಮಾತ್ರ ಬಿಟ್ಟು ಹೋಗಿದ್ದಾರೆ. ಸುದ್ದಿ ತಿಳಿದ ತಕ್ಷಣವೇ ಪೊಲೀಸರು ಬೇಟಿ ನೀಡಿ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರಿಂದ ತನಿಖೆ ಪ್ರಾರಂಭಿಸಿದ್ದಾರೆ.ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here