ಕಲಬುರಗಿ ಸೇರಿದಂತೆ ರಾಜ್ಯದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ

ಕಲಬುರಗಿ: ವಿಜಯಪುರ-ಕಲಬುರಗಿ-ಹುಮನಾಬಾದ ರಾಷ್ಟ್ರೀಯ ಹೆದಾರಿ-50 ಸೇರಿದಂತೆ 10904 ಕೋಟಿ ರೂ. ಮೊತ್ತದ ಕರ್ನಾಟಕದ 33 ರಾಷ್ಟೀಯ ಹೆದ್ದಾರಿಗಳ ಯೋಜನೆಗಳಿಗೆ ಶನಿವಾರ ಕೇಂದ್ರ ರಸ್ತೆ ಸಾರಿಗೆ, ರಾಷ್ಟೀಯ ಹೆದ್ದಾರಿ ಹಾಗೂ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಿತೀನ್ ಗಡ್ಕರಿ ಅವರು ವಚ್ರ್ಯುವಲ್ ಮೀಟಿಂಗ್ ಮೂಲಕ ಚಾಲನೆ ನೀಡಿದರು.

25 ಶಂಕುಸ್ಥಾಪನೆ ಮತ್ತು 8 ರಾಷ್ಟ್ರಕ್ಕೆ ಸಮರ್ಪಣೆ ಕಾಮಗಾರಿಗಳು ಸೇರಿದಂತೆ ರಾಜ್ಯದ 33 ರಾಷ್ಟ್ರೀಯ ಹೆದ್ದಾರಿಗಳ 1197 ಕೀ.ಮಿ ಉದ್ದದ ರಸ್ತೆಗೆ 10,904 ಕೋಟಿ ರೂ. ವೆಚ್ಚ ವ್ಯಯ ಮಾಡಲಾಗುತ್ತಿದ್ದು, ಶಂಕುಸ್ಥಾಪನೆ ನೆರವೇರಿಸಿರುವ ಕಾಮಗಾರಿಗಳು 2022ರ ಹೊತ್ತಿಗೆ ಪೂರ್ಣಗೊಳ್ಳಲಿವೆ ಎಂದ ಸಚಿವರು ದಕ್ಷಿಣ ಭಾಗದಲ್ಲಿ ಕರ್ನಾಟಕ ರಾಜ್ಯವು ವೇಗವಾಗಿ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಇಂದು ಚಾಲನೆ ನೀಡಿದ ನಾನಾ ಯೋಜನೆಗಳು ಕರ್ನಾಟಕದ ವಿವಿಧ ಭಾಗಗಳಿಗೆ ಸಂಪರ್ಕ ಸಾಧಿಸಲು ಸಹಕಾರಿಯಾಗುವುದಲ್ಲದೆ ರಾಜ್ಯದ ಸಂಪೂರ್ಣ ಚಿತ್ರಣವೇ ಬದಲಾಗಲಿದೆ ಎಂದು ಸಚಿವ ನಿತೀನ್ ಗಡ್ಕರಿ ಹೇಳಿದರು.

ರಸ್ತೆ ಅಭಿವೃದ್ಧಿಯ ಸೂಚಕಗಳಾಗಿದ್ದು, ಸುಗಮ ಸಾರಿಗೆ ವ್ಯವಸ್ಥೆಯಿಂದ ಆರ್ಥಿಕತೆ ದ್ವಿಗುಣಗೊಂಡು ಕೈಗಾರಿಕೆ ಮತ್ತು ಬಂಡವಾಳ ಹೂಡಿಕೆಗೆಯಾಗಿ ವಿಫುಲ ಉದ್ಯೋಗ ಅವಕಾಶ ಬೆಳೆಯಲಿವೆ ಎಂದ ನಿತೀನ್ ಗಡ್ಕರಿ ಅವರು ಈಗಾಗಲೆ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮುಂದಿನ ಹಂತದ ಅನುದಾನ ಬಿಡುಗಡೆಗೆ ಕೂಡಲೆ ಹಣ ಬಳಕೆ ಪ್ರಮಾಣ ಪತ್ರ ರಾಜ್ಯ ಸರ್ಕಾರ ಸಲ್ಲಿಸಬೇಕು ಎಂದರು.

ಹೊಸ ಎಥೆನಾಲ್ ನೀತಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ 22 ರೂ. ಗಳಿದ್ದು, ಕೇಂದ್ರ ಸರ್ಕಾರ 34 ರೂ. ಗಳು ನೀಡಿ ಖರೀದಿಸುತ್ತಿದೆ. ಇದರಿಂದ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದ್ದು, ಇದನ್ನು ತಪ್ಪಿಸಲು ಹೊಸ ಎಥೆನಾಲ್ ಉತ್ಪಾದನೆಗೆ ನೀತಿಯೊಂದನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಕರ್ನಾಟಕದಲ್ಲಿ ಹೆಚ್ಚಿನ ಕಬ್ಬು ಬೆಳೆಯುವುದರಿಂದ ಇಲ್ಲಿ ಸಕ್ಕರೆ ಕಾರ್ಖಾನೆಗಳು ಹೆಚ್ಚಿದ್ದು, ಪೆಟ್ರೋಲ್‍ಗೆ ಪರ್ಯಾಯವಾಗಿ ಎಥೆನಾಲ್ ಬಳಕೆಗೆ ಕರ್ನಾಟಕ ಸರ್ಕಾರವು ಮುಂದಾಗಬೇಕು ಎಂದರು.

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದ ವಿಡಿಯೋ ಕಾನನ್ಫರೆನ್ಸ್‍ನಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ ಶಿರಾಡಿ ಘಾಟ್ ಸುರಂಗ ಮಾರ್ಗ, ಚಾರ್ಮುಡಿ ಘಾಟ್, ಬೆಂಗಳೂರು-ತುಮಕೂರು ಅಷ್ಠ ಪಥದ ರಸ್ತೆ ಯೋಜನೆಗೆ ಅನುಮೋದನೆ ನೀಡಬೇಕು ಮತ್ತು ಇತ್ತೀಚೆಗೆ ನೆರೆ ಹಾವಳಿಯಿಂದ ಹಾನಿಯಾದ ಹೆದ್ದಾರಿಗಳ ದುರಸ್ತಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಇತ್ತ ಕಲಬುರಗಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ ವಿಡಿಯೋ ಕಾನ್ಫೆರೆನ್ಸ್ ಕಾರ್ಯಕ್ರಮದಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಅಫಜಲಪುರ ಶಾಸಕ ಎಂ.ವೈ ಪಾಟೀಲ್, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ ಪಾಟೀಲ್, ಶಶೀಲ್ ಜಿ. ನಮೋಶಿ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಎನ್.ಹೆಚ್.ಎ.ಐ ಕಲಬುರಗಿ ಅನುಷ್ಟಾನ ಕಚೇರಿಯ ವ್ಯವಸ್ಥಾಪಕ ಚಾಲ್ರ್ಸ್ ಜೆ., ಇಂಜಿನೀಯರ್ ಪ್ರದೀಪ ಹಿರೇಮಠ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420