ದೆಹಲಿ ರೈತರ ಹೋರಾಟದಲ್ಲಿ ತಮ್ಮ ಜೀವವನ್ನು ಕಳೆದುಕೊಂಡ ರೈತರಿಗೆ ಶ್ರದ್ಧಾಂಜಲಿ

ಶಹಾಬಾದ: ಕೇಂದ್ರ ಸರಕಾರದ ರೈತ ವಿರೋಧಿ ಮತ್ತು ಕಾರ್ಪೋರೇಟರ ಪರ ನೀತಿಗಳನ್ನು ಧಿಕ್ಕರಿಸಿ ‘ದೆಹಲಿ ಚಲೋ’ ರೈತರ ಹೋರಾಟದಲ್ಲಿ ತಮ್ಮ ಜೀವವನ್ನು ಕಳೆದುಕೊಂಡ ರೈತರಿಗೆ ರೈತ-ಕೃಷಿ ಕಾರ್ಮಿಕ ಸಂಘಟನೆಯಿಂದ ರವಿವಾರ ಶಹಬಾದ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಶ್ರದ್ಧಾಂಜಲಿ ಸಭೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರೈತ ಕೃಷಿ ಕಾಮರ್ಿಕ ಸಂಘಟನೆ ಮುಖಂಡ ರಾಘವೇಂದ್ರ.ಎಮ್.ಜಿ ಮಾತನಾಡಿ, ಕೇಂದ್ರ ಬಿ.ಜೆ.ಪಿ. ಸರಕಾರದ ರೈತವಿರೋಧಿ, ಕಾರ್ಮಿಕ ವಿರೋಧಿ ಎಪಿಎಂಸಿ ತಿದ್ದುಪಡಿ ಕಾಯ್ದೆ, ಬೆಲೆ ಭರವಸೆ (ಸಶಕ್ತೀಕರಣ ಮತ್ತು ಸುರಕ್ಷೆ) ಕೃಷಿ ಸೇವೆಗಳ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ತಿದ್ದುಪಡಿ ಮಸೂದೆ, ಭೂ ಸ್ವಾಧೀನ ತಿದ್ದುಪಡಿ ಕಾಯ್ದೆಗಳು ಕಾಪೋರೇಟ್ ಮನೆತನಗಳಿಗಾಗಿ ಜಾರಿಗೊಳಿಸುತ್ತಿದೆ.

ಕೊರೆಯುವ ಚಳಿಯಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಬಿಡಾರ ಹೂಡಿರುವ ಉತ್ತರ ಭಾರತದ ಸುಮಾರು ಎರಡು ಕೋಟಿಗೂ ಅಧಿಕ ರೈತರು ಕೇಂದ್ರ ಸರಕಾರದ ಕರಾಳ ರೈತ ವಿರೋಧಿ ಮಸೂದೆಗಳ ವಿರುದ್ಧ ಧಿರೋದಾತ್ತವಾಗಿ ಹೋರಾಡುತ್ತಿದ್ದಾರೆ. ಈ ಹೋರಾಟವನ್ನು ಮುರಿಯಲು ಒಂದೆಡೆ ಕೇಂದ್ರ ಸರಕಾರವು ಹರಸಾಹಸವನ್ನು ಮಾಡುತ್ತಾ ಎಲ್ಲಾ ಪ್ರಜಾತಾಂತ್ರಿಕ ರೂಢಿಗಳನ್ನು ಮಣ್ಣು ಮಾಡಿ ರೈತರ ಮೇಲೆ ದೌರ್ಜನ್ಯವೆಸುತ್ತಿದ್ದರೆ, ಇನ್ನೊಂದೆಡೆ ಮೊನ್ನೆ ಸುಪ್ರಿಂ ಕೋರ್ಟ ರೈತರ ಹೋರಾಟದ ಕುರಿತು ತನ್ನ ಅನುಕಂಪವನ್ನು ವ್ಯಕ್ತಪಡಿಸಿ ರೈತರ ಹೋರಾಟದ ಹಕ್ಕನ್ನು ಎತ್ತಿಹಿಡಿದಿದೆ.

ಸರಕಾರವು ರೈತ ನಾಯಕರೊಂದಿಗೆ6 – 7 ಸುತ್ತಿನ ಮಾತುಕತೆಯ ನಂತರ ತನ್ನ ಬಂಡವಾಳಶಾಹಿಗಳ ಪರವಾದ ನಿಷ್ಠೆಯನ್ನು ಮುಂದುವರೆಸುತ್ತಾ ರೈತರೊಂದಿಗಿನ ಮೊಂಡುತನವನ್ನು ಪ್ರದರ್ಶಿಸಿದೆ. ಅಲ್ಲದೆ ದೇಶಪ್ರೇಮಿ ರೈತರಿಗೆ ಕಳಂಕ ಹಚ್ಚುವ ಅನೈತಿಕ ಕೆಲಸವನ್ನು ಮಾಡುತ್ತಿದೆ. ಆದರೂ ಧೀರ ರೈತ ಹೋರಾಟಗಾರರು ಸರಕಾರದ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸಿ ತಮ್ಮ ಐಕ್ಯತೆಯನ್ನು ಹಾಗೂ ತಮ್ಮ ಪ್ರಬಲ ವಿರೋಧವನ್ನು ಪ್ರದರ್ಶಿಸುತ್ತಿದ್ದಾರೆ.ಈ ಸಂದರ್ಭದಲ್ಲಿ ಹೋರಾಟನಿರತ ರೈತರು ಹಲವಾರು ಆರೋಗ್ಯದ ಕಾರಣಗಳಿಂದ ಹೋರಾಟದ ಮೈದಾನದಲ್ಲಿ ಪ್ರಾಣಕಳೆದುಕೊಂಡಿದ್ದು, ಅವರಿಗೆ ನಮ್ಮ ಸಂಘಟನೆ ತೀವ್ರ ಸಂತಾಪವನ್ನು ಸೂಚಿಸುತ್ತದೆ. ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಬೇಕೆಂದರು.

ಜಗನ್ನಾಥ.ಎಸ್.ಹೆಚ್,ಗುಂಡಮ್ಮ ಮಡಿವಾಳ,ತಿಮ್ಮಯ್ಯ.ಬಿ.ಮಾನೆ, ನೀಲಕಂಠ.ಎಮ್.ಹುಲಿ,ತುಳಜರಾಮ.ಎನ್.ಕೆ, ರಮೇಶ ದೇವಕರ,ರಾಜೇಂದ್ರ ಅತನೂರ, ಪ್ರವೀಣ್, ಕಿರಣ್ ಸೇರಿ ಹಲವಾರು ರೈತರು ಭಾಗವಹಿಸಿದ್ದರು.

emedia line

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420