ಬಿಸಿ ಬಿಸಿ ಸುದ್ದಿ

ಯುವಜನರಿಗಾಗಿ “ಯುವಜನ ಸಬಲೀಕರಣ ನಿಗಮ” ಸ್ಥಾಪಿಸುವಂತೆ ಕರ್ನಾಟಕ ಯುವ ಮುನ್ನಡೆ ಒತ್ತಾಯ

ಕಲಬುರಗಿ : ಕರ್ನಾಟಕ ಯುವ ಮುನ್ನಡೆ, ಕುಲಬುರಗಿ ಜಿಲ್ಲಾ ಸಮಿತಿ ವತಿಯಿಂದ ರಾಜ್ಯದಲ್ಲಿ ‘ಯುವಜನ ಸಬಲೀಕರಣ ನಿಗಮ’ ಸ್ಥಾಪಿಸುವಂತೆ ಕಲಬುರಗಿ ಜಿಲ್ಲಾಧಿಕಾರಿಗಳ ಮತ್ತು ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಸರಕಾರ ಧರ್ಮ, ಜಾತಿ, ಪ್ರದೇಶ ಆಧಾರದಲ್ಲಿ ಅನೇಕ ನಿಗಮ ಹಾಗೂ ಪ್ರಾಧಿಕಾರಗಳನ್ನು ರಚಿಸುತ್ತಿದೆ. ಇಂತಹ ನಿಗಮಗಳಿಂದ ಸಮಾಜದ ಉಳ್ಳವರಿಗೆ ಕೆಲವರಿಗೆ ಮಾತ್ರ ಉಪಯೋಗವಾಗುತ್ತಿದ್ದು, ಮಧ್ಯಮ ಮತ್ತು ಕೆಳ ವರ್ಗದ ಯುವಜನರಿಗೆ ಯಾವುದೇ ರೀತಿಯ ಪ್ರಯೋಜನ ಆಗುತ್ತಿಲ್ಲ. ಆದ್ದರಿಂದ ಯುವಜನರ ಸಬಲೀಕರಣಕ್ಕೆ ಯುವಜನ ನಿಗಮ ಸ್ಥಾಪಿಸುವ ಅಗತ್ಯ ಇಂದು ಎದ್ದು ಕಾಣುತ್ತಿದೆ.

ರಾಜ್ಯದಲ್ಲಿ ಸುಮಾರು 2 ಕೋಟಿ ಯುವಜನರಿದ್ದಾರೆ. ಅವರೆಲ್ಲಾ ಸಬಲೀಕರಣಗೊಂಡರೆ ರಾಜ್ಯಕ್ಕೆ ಮತ್ತು ದೇಶಕ್ಕೆ ಮುಂದಿನ ದಿನಗಳಲ್ಲಿ ಸಕಾರಾತ್ಮಕವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ ಯುವಜನ ಸಬಲೀಕರಣ ನಿಗಮ ಸ್ಥಾಪಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿ ಕರ್ನಾಟಕ ಯುವ ಮುನ್ನಡೆ, ಕಲಬುರಗಿ ಜಿಲ್ಲಾ ಸಮಿತಿ ಮನವಿಯೊಂದನ್ನು ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಯವರಿಗೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಯುವಮುನ್ನಡೆ ಜಿಲ್ಲಾ ಸಮಿತಿ ಸಂಚಾಲಕರಾದ ನಂದಿನಿ ಕೊಳ್ಳದ, ಸಹಸದಸ್ಯರಾದ ಬಿನಿತಾ, ಮಧುಸೂದನ್, ರೇಣುಕಾ ಹನ್ನುರ, ರೇವತಿ ಮ್ಯಾಗೇರಿ, ರೇಣುಕಾ ಹುನಚಗೇರಿ, ರಮಾ ದೊಡ್ಮನಿ, ನೇಹಾ, ಸವಿತಾ, ಸಾಬಮ್ಮ, ಪೂಜಾ ಮತ್ತಿತರರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago