ಮತ ಪೆಟ್ಟಿಗೆ ಸಂಗ್ರಹಿಸಿಟ್ಟಿದ್ದ ಶ್ರೀ ಪ್ರಭು ಕಾಲೇಜಿಗೆ ಜಿಲ್ಲಾಧಿಕಾರಿ ಭೇಟಿ

0
41

ಸುರಪುರ: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದ ಶ್ರೀ ಪ್ರಭು ಕಾಲೇಜಿಗೆ ಜಿಲ್ಲಾಧಿಕಾರಿ ಡಾ: ರಾಗಪ್ರಿಯ ಅವರು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮತದಾನದ ಪೆಟ್ಟಿಗೆಗಳು,ಮತದಾನ ಕೇಂದ್ರಕ್ಕೆ ತೆರಳಲು ಸಿದ್ಧವಾಗಿದ್ದ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿ,ತಾಲೂಕಿನ ೨೦ ಗ್ರಾಮ ಪಂಚಾಯತಿಗಳ ೧೪೧ ಮತಗಟ್ಟೆಗಳಲ್ಲಿ ಎಲ್ಲಿಯೂ ಯಾವುದೇ ಮತಗಟ್ಟೆಯಲ್ಲಿ ಏನು ಸಮಸ್ಯೆಯಾಗದಂತೆ ಕಾರ್ಯನಿರ್ವಹಿಸಿ,ಅಲ್ಲದೆ ಮತದಾನಕ್ಕೆ ಬರುವ ಎಲ್ಲರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಕ್ರಮ ಕೈಗೊಳ್ಳಿ ಮತ್ತು ಪ್ರತಿ ಮತಗಟ್ಟೆಯಲ್ಲಿ ಥರ್ಮಲ ಸ್ಕ್ರೀನಿಂಗ ವ್ಯವಸ್ಥೆಯನ್ನು ಮಾಡಿಕೊಳ್ಳಿ ಯಾವುದೇ ರೀತಿಯ ಸಮಸ್ಯೆಯುಂಟಾದಲ್ಲಿ ಸಿಬ್ಬಂದಿಗಳೆ ಹೊಣೆಯಾಗಲಿದ್ದೀರಿ ಎಂದು ಎಚ್ಚರಿಸಿದರು.

Contact Your\'s Advertisement; 9902492681

ನಂತರ ಮತಪೆಟ್ಟಿಗೆಗಳನ್ನು ಹೊತ್ತೊಯ್ಯಲು ತಯಾರಾಗಿ ನಿಂತಿದ್ದ ವಾಹನಗಳನ್ನು ಕೂಡ ವೀಕ್ಷಿಸಿದರು,ಈ ಸಂದರ್ಭದಲ್ಲಿ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಸೇರಿದಂತ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here