ಇಬ್ಬರು ಬೈಕ್ ಕಳ್ಳರ ಬಂಧನ: ಹಿರೋ ಹೊಂಡಾ ವಾಹನಗಳು ಜಪ್ತಿ

ಕಲಬುರಗಿ: ನಗರದ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಚೌಕ್ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ 10ಕ್ಕೂ ಹೆಚ್ಚು ಹಿರೋ ಹೊಂಡಾ ಬೈಕ್ ಗಳನ್ನು ವಶ ಪಡಿಸಿಕೊಂಡಿದ್ದಾರೆ.

ನಗರದ ಪಿಎನ್ಟಿ ಕ್ರಾಸ್ ನ ರಘು ಬಾಬು ಕಟ್ಟಿಮನಿ (20) ಹಾಗೂ ಡಾಬರಬಾದ ನಿವಾಸಿ ಉಮಾಕಾಂತ ಸುರೇಶ (20) ಬಂಧಿತ ಬೈಕ್ ಕಳ್ಳರೆಂದು ಗುರುತಿಸಲಾಗಿದೆ. ನಿನ್ನೆ ಜೈಡಿ.ಎ ರೇಔಟ್‌ ನಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಆರೋಪಿಗಳಿಂದ 10 ಹಿರೋ ಹೊಂಡಾ 400,000/-ರೂ ಮೌಲ್ಯದ ದ್ವೀಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸ್‌ ಆಯುಕ್ತರಾದ ಐಪಿಎಸ್‌ ಎನ್‌.ಸತೀಶ ಕುಮಾರ್‌  ರವರ ನಿರ್ದೇಶನದ ಮೇರೆಗೆ ಉಪ ಪೊಲೀಸ್‌ ಆಯುಕ್ತರಾದ ಐ.ಪಿ.ಎಸ್‌ ಕಿಶೋರ ಬಾಬು (ಕಾ ಮತ್ತು ಸು) ಹಾಗೂ ಅಪರಾದ ಮತ್ತು ಸಂಚಾರ ವಿಭಾಗ ಉಪ ಪೊಲೀಸ್‌ ಆಯುಕ್ತರಾದ ಶ್ರೀಕಾಂತ ಕಟ್ಟಿಮನಿ ಮಾರ್ಗದರ್ಶನದಲ್ಲಿ, ಸಹಾಯಕ ಪೊಲೀಸ್‌ ಆಯುಕ್ತ (ಎ) ಉಪ-ವಿಭಾಗದ ಐಸಿಎಸ್‌ ಅ೦ಶುಕುಮಾರ ರವರುಗಳ ನೇತೃತ್ವದಲ್ಲಿ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರಾದ.ಸಿದ್ದರಾಮೇಶ್ಚರ ಗಡೇದ ರವರು ಠಾಣೆಯ ಸಿಬ್ಬಂದಗಳಾದ ನಜ್ಜುಮೊದ್ದೀನ್‌, ದೇವೆಂದ್ರಜಯಭೀಮ. ಮಲ್ಲಿಕಾರ್ಜುನ್‌. ಪಿರೋಜ್‌, ಮಬ್ಲಣ್ಣಗೌಡ, ‘ದೊಗೇಶ್‌. ಮೋಶಿನ್‌ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

4 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

13 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

13 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

14 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

16 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420