ಬಿಸಿ ಬಿಸಿ ಸುದ್ದಿ

ಕಸ ವಿಲೇವಾರಿ ವಾಹನಗಳ ಸೌಲಭ್ಯ ಒದಗಿಸಲು ಪೌರಾಯುಕ್ತರಿಗೆ ಮನವಿ

ಸುರಪುರ: ಸ್ಥಳೀಯ ನಗರಸಭೆ ವ್ಯಾಪ್ತಿಯ ಸತ್ಯಂಪೇಟೆಯ (ವಣಕಿಹಾಳ) ಎರಡು ವಾರ್ಡುಗಳಲ್ಲಿ ಕಸ ವಿಲೇವಾರಿಗೊಳ್ಳದೇ ಎಲ್ಲಾ ಕಡೆ ಕಸದ ರಾಶಿ ತುಂಬಿ ಹೋಗಿದ್ದು ಕೂಡಲೇ ಕಸ ವಿಲೇವಾರಿ ಸಲುವಾಗಿ ವಾಹನ ಸೌಲಭ್ಯ ಒದಗಿಸಬೇಕು ಎಂದು ಲೋಕ ಜನಶಕ್ತಿ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ ನಾಯಕ ಒತ್ತಾಯಿಸಿದ್ದಾರೆ.

ಈ ಮೊದಲು ಪುರಸಭೆ ನಂತರ ನಗರಸಭೆ ಆದ ನಂತರ ವಾರ್ಡುಗಳ ವಿಂಗಡಣೆಯಲ್ಲಿ ಎರಡು ವಾರ್ಡುಗಳನ್ನು ಒಳಗೊಂಡಿದ್ದು ಆದರೆ ಇಲ್ಲಿನ ನಾಗರಿಕರಿಗೆ ನಗರಸಭೆಯಿಂದ ಕಸ ವಿಲೇವಾರಿ ಸಲುವಾಗಿ ವಾಹನ ಸೌಲಭ್ಯ ಒದಗಿಸದೇ ವಂಚಿತರನ್ನಾಗಿ ಮಾಡಲಾಗುತ್ತಿದೆ ಎಂದು ಅವರು ದೂರಿದ್ದಾರೆ, ನಗರಸಭೆ ಉಳಿದ ಎಲ್ಲಾ ವಾರ್ಡುಗಳಲ್ಲಿ ಕಸ ವಿಲೇವಾರಿ ಸಲುವಾಗಿ ವಾಹನಗಳ ಸೌಲಭ್ಯ ನೀಡಲಾಗುತ್ತಿದ್ದು ಆದರೆ ಇಲ್ಲಿನ ೨ ವಾರ್ಡುಗಳ ಜನರಿಗೆ ಮಾತ್ರ ವಾಹನಗಳ ಸೌಲಭ್ಯ ಏಕೆ ನೀಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ, ಕಸ ವಿಲೇವಾರಿ ಆಗದೇ ಎಲ್ಲೆಂದರಲ್ಲಿ ರಸ್ತೆಯ ಮೇಲೆ ಹಾಗೂ ಚರಂಡಿಗಳಲ್ಲಿ ಕಸ ಸಂಗ್ರಹಣಗೊಂಡು ಗಬ್ಬೆದ್ದು ನಾರುತ್ತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಅಪಾಯ ತಂದೊಡ್ಡಿದೆ ಕೂಡಲೇ ಈ ಬಗ್ಗೆ ಗಂಭೀರವಾಗಿ ತೆಗೆದುಕೊಂಡು ಎರಡು ವಾರ್ಡುಗಳ ಜನರಿಗೆ ಅನುಕೂಲವಾಗುವಂತೆ ಪ್ರತಿನಿತ್ಯ ಕಸ ವಿಲೇವಾರಿ ವಾಹನ ಸೌಲಭ್ಯ ಒದಗಿಸಬೇಕು ಎಂದು ಅವರು ಪೌರಾಯುಕ್ತ ಏಜಾಜ್ ಹುಸೇನ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ, ಈ ಸಂದರ್ಭದಲ್ಲಿ ಮುಖಂಡ ರಾಜಾ ರಾಮಪ್ಪ ನಾಯಕ (ಜೇಜಿ) ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

3 hours ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

4 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

4 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

5 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420