ಸುರಪುರ: ವನವಾಸಿ ಕಲ್ಯಾಣ ಸಂಘಟನೆ ವತಿಯಿಂದ ತಾಲೂಕಿನ ಲಕ್ಷ್ಮೀಪುರದ ಮರಡಿ ಮಲ್ಲಿಕಾರ್ಜುನ ದೇವಸ್ಥಾನದ ಬಳಿಯ ಶ್ರೀಗಿರಿ ಮಠದ ಆವರಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ನಡೆಸಲಾಯಿತು.
ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳ ಆಶೀರ್ವಾದದಿಂದ ನಡೆದ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅನೇಕ ಮುಖಂಡರು,ವನವಾಸಿ ಕಲ್ಯಾಣ ಸಂಘಟನೆಯು ಅನೇಕ ವರ್ಷಗಳಿಂದ ನಾಡಿನ ಎಲ್ಲಾ ಅತೀ ಹಿಂದುಳಿದ ಸಮುದಾಯಗಳ ಅಭೀವೃಧ್ಧಿಗಾಗಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದು,ಇಂದು ಜಿಲ್ಲೆಯಲ್ಲಿನ ವನವಾಸಿ ಕಲ್ಯಾಣ ಸಂಘಟನೆಯ ಯುವಕರಿಗಾಗಿ ಕ್ರೀಡಾಕೂಟಗಳನ್ನು ಹಮ್ಮಿಕೊಳ್ಳುವ ಮೂಲಕ ಯುವಕರ ದೈಹಿಕ ಮಾನಸಿಕ ಮತ್ತು ಆರೋಗ್ಯದ ವೃದ್ಧಿಗಾಗಿ ಒತ್ತು ನೀಡಲಾಗಿದೆ ಎಂದರು.
ಎಲ್ಲಾ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಯಾವುದೇ ರೀತಿಯ ವಿವಾದಗಳಿಗೆ ಅವಕಾಶ ನೀಡದೆ ಕ್ರೀಡಾ ಮನೋಭಾವನೆಯನ್ನು ಗಮನದಲ್ಲಿಟ್ಟುಕೊಂಡು ಸ್ನೇಹ ಸೌಹಾರ್ಧತೆಯಿಂದ ಆಟವಾಡಿ ಕ್ರೀಡಾ ಮನೋಭಾವನೆಯನ್ನು ಮೆರೆಯುವಂತೆ ತಿಳಿಸಿದರು.
ನಂತರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಹೆಮನೂರ ಲಕ್ಷ್ಮೀಪುರ ಲಿಂಗದಳ್ಳಿ ತೋಳದಿನ್ನಿ ದೇವಪುರ ಗ್ರಾಮಗಳ ಕ್ರೀಡಾಪಟುಗಳು ಭಾಗವಹಿಸಿ ಕಬ್ಬಡ್ಡಿ ಪಂದ್ಯಾವಳಿಗಳಲ್ಲಿ ತಮ್ಮ ಆಟವನ್ನು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಮೇಶ ದೊರೆ ಆಲ್ದಾಳ ವೆಂಕಟೇಶ ಬೇಟೆಗಾರ ಕಾಶಪ್ಪ ದೊರೆ ಯಾದಗಿರಿ ಸಿದ್ದಣ್ಣ ವೆಂಕಟೇಶ ಹೆಮನೂರ ಶರಣು ನಾಯಕ ಹಣಮಂತ್ರಾಯ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…