ಶಹಾಬಾದ:ನಗರದ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀ ರೋಗ ತಜ್ಞೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಗರಸಭೆಯ ವತಿಯಿಂದ ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರು ಸಲ್ಲಿಸಿ, ಆಗ್ರಹಿಸಿದರು.
ನಗರದ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀ ರೋಗ ತಜ್ಞೆ ಡಾ. ಚಂದ್ರಿಕಾ ಅವರು ವಾರಕ್ಕೆ ಒಂದೇ ದಿನ ಕರ್ತವ್ಯಕ್ಕೆ ಹಾಜರಾಗುತ್ತಾರೆ.ಅದು ಬುಧವಾರದಂದ ಮಾತ್ರ.ಅಲ್ಲದೇ ಹಾಜರಾದರೂ ಕೇವಲ ಒಂದೆರಡು ಗಂಟೆ ಮಾತ್ರ ಕೆಲಸ ಮಾಡುತ್ತಾರೆ.ಅಲ್ಲದೇ ಆಸ್ಪತ್ರೆಗೆ ಬಂದ ರೋಗಿಗಳ ವಿರುದ್ಧ ಅಸಭ್ಯವಾಗಿ ವರ್ತಿಸುತ್ತಾರೆ.ಸರಿಯಾಗಿ ಚಿಕಿತ್ಸೆಯೂ ನೀಡದೇ, ತಮ್ಮ ಖಾಸಗಿ ಆಸ್ಪತ್ರೆಗೆ ಬರುವಂತೆ ಹೇಳುತ್ತಾರೆ.ಆದರೆ ಅಲ್ಲಿ ಹೋದರೇ ಮನಸ್ಸಿಗೆ ಬಂದಂತೆ ಹಣ ಕೀಳುತ್ತಿದ್ದಾರೆ ಎಂಬುದು ಸಾರ್ವಜನಿಕರ ಹಾಗೂ ನಗರಸಭೆಯ ಸದಸ್ಯರ ದೂರು ಬರುತ್ತಿದೆ.
ಅಲ್ಲದೇ ಒಂದೆರಡು ದಿನಗಳ ಹಿಂದಷ್ಟೇ ನಗರಸಭೆಯ ಅಧ್ಯಕ್ಷೆ, ನಗರಸಭೆಯ ಸದಸ್ಯರಿಗೆ, ವಿವಿಧ ಪಕ್ಷದ ಮುಖಂಡರಿಗೆ ಅಸಭ್ಯವಾಗಿ ವರ್ತಿಸಿ ಗೊಂದಲದ ವಾತಾವರಣವನ್ನು ಸೃಷ್ಠಿಸಿದ್ದಾರೆ.ಆದ್ದರಿಂದ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕು.ಇಲ್ಲದಿದ್ದರೇ ಒಂದೆರಡು ದಿನಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ,ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ನಗರಸಭೆಯ ಸದಸ್ಯೆ ಸಾಬೇರಾಬೇಗಂ ಅವರು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ದೂರಿನ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಗಿರೀಶ ಕಂಬಾನೂರ, ಸದಸ್ಯರಾದ ಸೂರ್ಯಕಾಂತ ಕೋಬಾಳ, ನಾಗರಾಜ ಕರಣಿಕ್,ಮಲ್ಲಿಕಾರ್ಜುನ ವಾಲಿ,ಶಿವಕುಮಾರ ನಾಟೇಕಾರ,ಮಹ್ಮದ್ ಅಜರ್,ಕಿರಣ ಚವ್ಹಾಣ, ಜಾವೀದ್ ಸೇರಿದಂತೆ ಅನೇಕರು ಹಾಜರಿದ್ದರು.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…