ಅಂಬೇಡ್ಕರ್ ನಾಮಫಲಕ ತೆರವು ದಲಿತ ಸಂಘಟನೆಗಳಿಂದ ಪ್ರತಿಭಟನೆ

0
100

ಯಾದಗಿರಿ: ಅಂಬೇಡ್ಕರ್ ಭಾವಚಿತ್ರವುಳ್ಳ ನಾಮಫಲಕವನ್ನು ಏಕಾಏಕಿ ತೆಗೆದು ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ  ನೂತನ  ತಾಲೂಕು ಎಚ್. ವಡಗೇರಿಯಲ್ಲಿ ಜರುಗಿದೆ.

ವಡಗೇರಿ ಠಾಣೆಯ ಪೊಲೀಸ್ ಸಿಬ್ಬಂದಿಗಳೇ ಈ ನಾಮಫಲಕ ತೆರವುಗೊಳಿಸಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಇದು ಡಾ.ಬಾಬಾ ಸಾಹೇಬ್ ಅಂಬೇಡ್ಕರರಿಗೆ ಮಾಡಿದ ಅವಮಾನ, ನಾಮಫಲಕ ತೆರವುಗೊಳಿಸಿರುವವರನ್ನು ಕೂಡಲೇ ಅಮಾನತು ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಬೆಳಿಗ್ಗೆಯಿಂದ ಇಲ್ಲಿವರೆಗೂ ರಸ್ತೆ ತಡೆ ಮಾಡಿ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ ಸಾಯಂಕಾಲ ೬ ಗಂಟೆಯಾದರೂ ಪ್ರತಿಭಟನೆಯಿಂದ ಹಿಂದೆ ಸರಿಯಲಿಲ್ಲ.

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಇಲ್ಲದಿದ್ದರೆ ನಾಳೆ ರಾಜ್ಯ ರಸ್ತೆ ಬಂದ್ ಮಾಡಿ ಯಾದಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಶರಣರೆಡ್ಡಿ ಹತ್ತಿಗೂಡುರು ಹೇಳಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಚಿಂತಕರು, ಬುದ್ಧ, ಬಸವ ಅಂಬೇಡ್ಕರ್ ಅನುಯಾಯಿಗಳು ದಲಿತ ಸಂಘರ್ಷ ಸಮಿತಿಯ ಸರ್ವ ಸದಸ್ಯರು ಗ್ರಾಮದ ಹಿರಿಯ ಕಿರಿಯ ಮುಖಂಡರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here