ಸುರಪುರ: ನಗರದ ರಂಗಂಪೇಟೆಯ ಹಸನಾಪುರದ ಶ್ರೀ ಮರೆಮ್ಮ ದೇವಾಲಯದ ಪಕ್ಕದಲ್ಲಿ ಕಳೆದ ಅನೇಕ ತಿಂಗಳುಗಳಿಂದ ಹೊನ್ನಪ್ಪ ತಳವಾರ ಮತ್ತವರ ಪತ್ನಿ ಹಾಗು ಮೂವರು ಮಕ್ಕಳೊಂದಿಗೆ ರಸ್ತೆ ಪಕ್ಕದಲ್ಲಿ ಚಿಕ್ಕದಾದ ಸೆಡ್ಡೊಂದನ್ನು ನಿರ್ಮಿಸಿಕೊಂಡು ಯಾವುದೇ ರೀತಿಯ ಆಶ್ರಯವಿಲ್ಲದೆ ಜೀವನ ನಡೆಸುತ್ತಿದೆ.
ಈ ಕುಟುಂಬದ ಸ್ಥಿತಿಯನ್ನು ಕಂಡು ಮರುಗಿದ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ನ ಕಲಬುರ್ಗಿ ವಿಭಾಗಿಯ ಸಹ ಪ್ರಮುಖರಾದ ಉಪನ್ಯಾಸಕ ಡಾ: ಉಪೇಂದ್ರ ನಾಯಕ ಸುಬೇದಾರ ಅವರು,ಇಂತಹ ಚಳಿಗಾಲದಲ್ಲಿ ರಸ್ತೆ ಬದಿ ಜೀವನ ನಡೆಸುವುದಕ್ಕೆ ಮರುಗಿ ತಮ್ ಸ್ವಂತ ಹಣದಲ್ಲಿ ನಿತ್ಯದ ಉಪಜೀವನಕ್ಕೆ ಬೇಕಾದ ಅಕ್ಕಿ ಬೇಳೆ ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ನೆರವು ನೀಡುವ ಮೂಲಕ ಕುಟುಂಬಕ್ಕೆ ನೆರವಾಗಿದ್ದಾರೆ.
ಅಲ್ಲದೆ ಈ ಸಂದರ್ಭದಲ್ಲಿ ಡಾ: ಉಪೇಂದ್ರ ನಾಯಕ ಸುಬೇದಾರ ಮಾತನಾಡಿ,ಸರಕಾರಗಳು ಉಳ್ಳವರಿಗೆ ಏನೆಲ್ಲ ಸೌಲಭ್ಯಗಳನ್ನು ನೀಡುತ್ತದೆ ಆದರೆ ಇಂತಹ ಬಡ ಜನರತ್ತ ಕಣ್ಣು ಹಾಯಿಸದಿರುವುದು ನೋವಿನ ಸಂಗತಿಯಾಗಿದೆ.ಸರಕಾರ ಹಾಗು ನಗರಸಭೆ ಈ ಕುಟುಂಬಕ್ಕೆ ಒಂದು ಆಶ್ರಯ ಮನೆಯನ್ನು ನೀಡುವ ಮೂಲಕ ನೆರವಾಗಬೇಕು ಮತ್ತು ಸ್ಥಳಿಯ ಜನಪ್ರತಿನಿಧಿಗಳು ಈ ಕುಟುಂಬಕ್ಕೆ ನೆರವಿಗೆ ಬರಬೇಕೆಂದು ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮುಖಂಡರಾದ ನಾಗರಾಜ ಮಕಾಶಿ ಕ್ಯಾತಪ್ಪ ಮೇದಾ ಸೇರಿದಂತೆ ಇತರರಿದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…