ಪ್ರಜಾಕೀಯ

ಧರ್ಮದ ಆಧಾರದ ಮೇಲೆ ದೇಶ ವಿಭಜಿಸುವ ಶಕ್ತಿಗಳನ್ನು ಸೋಲಿಸಿ:  ಖರ್ಗೆ ಮನವಿ.

ಕಲಬುರಗಿ: ದೇಶದ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಕಾಂಗ್ರೇಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲ ಸಮುದಾಯದವರು  ಪರಿಶ್ರಮಿಸಬೇಕು ಎಂದು ಕಲಬುರಗಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಕರೆ ನೀಡಿದರು.

ನಗರದ ರಾಜರಾಜೇಶ್ವರಿ ಹೋಟೆಲ್ ನ ಸಭಾಂಗಣದಲ್ಲಿ ನಡೆದ ಜಿಲ್ಲಾ ಗಾಣಿಗ ಸಮಾಜದ ಮುಖಂಡರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸಮಾಜಿಕ ನ್ಯಾಯ ಪರಿಕಲ್ಪನೆ, ಸಮಾನತೆಯ ಮೇಲೆ ನಂಬಿಕೆಯಿರದ ಬಿಜೆಪಿ ಹಾಗೂ ಆರ್ ಎಸ್ ಎಸ್ ಜಾತಿ ಆಧಾರದ ಮೇಲೆ ಜನರನ್ನು ಒಡೆಯುವಂತ ಕೆಲಸ ಮಾಡುತ್ತಿವೆ. ಆದರೆ, ಮತದಾರರು ಈಗ ಜಾಗೃತರಾಗಿದ್ದು ಈ ಸಲದ ಚುನಾವಣೆಯಲ್ಲಿ ದೇಶವಿಭಜಿಸುವ ಶಕ್ತಿಗಳಿಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೇಸ್ ಪಕ್ಷ‌ ಏನು ಅಭಿವೃದ್ದಿ ಮಾಡಿದೆ ಎಂದು ನಮ್ಮ ಪಕ್ಷದಿಂದ ಎಲ್ಲ ಅಧಿಕಾರ ಅನುಭವಿಸಿದರೇ ಇಂದು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಹೇಳಿದ ಖರ್ಗೆ, ಇಷ್ಟು ವರ್ಷ ನಮ್ಮ ಪಕ್ಷದಲ್ಲಿಯೇ ಇದ್ದ ನಿಮಗೆ ಪಕ್ಷ ಏನು ಮಾಡಿದೆ ಎಂದು ಗೊತ್ತಿಲ್ಲವೇ? ಎಂದು ಪ್ರಶ್ನೆ ಮಾಡಿದರು.

ಸಂವಿಧಾನದ ಆರ್ಟಿಕಲ್ 371 ಕ್ಕೆ ತಿದ್ದುಪಡಿ ತರಲು ನಡೆಸಿದ ಅವಿರತ ಹೋರಾಟವನ್ನು ವಿವರಿಸಿದ ಸಂಸದರು, ಬಿಜೆಪಿ ಅಧಿಕಾರದಲ್ಲಿದ್ದು ಅಡ್ಡಗಾಲು ಹಾಕಿತ್ತು ಆದರೆ ಅದೇ ಬಿಜೆಪಿ ನಾಯಕರು ನನ್ನ ಹೋರಾಟವನ್ನು ಪಶ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

ನಾನು ನನ್ನ ಶಕ್ತಿ ಮೀರಿ ಅಭಿವೃದ್ದಿ ಕೆಲಸ ಮಾಡಿದ್ದೇನೆ. ಈಗ ಮತ್ತೊಮ್ಮೆ ನಿಮ್ಮೆಲ್ಲರ ಆಶೀರ್ವಾದ ಬಯಸಿದ್ದೇನೆ ಎಂದು ಗಾಣಿಗ ಸಮಾಜದ ಬಾಂಧವರನ್ನು ವಿನಂತಿಸಿಕೊಂಡರು. ” ಗಾಣಿಗ ಸಮಾಜ ನಮ್ಮ ತಂದೆ ದಿವಂಗತ ಎನ್. ಧರಂಸಿಂಗ್ ಅವರೊಂದಿಗೆ ಭಾವನಾತ್ಮಕ‌ ಸಂಬಂಧ ಹೊಂದಿತ್ತು. ಆ ಸಂಬಂಧ ಈಗಲೂ ಕೂಡಾ ಮುಂದುವರೆದು ಅವರ ಮಾರ್ಗದರ್ಶನದಲ್ಲಿ ನಾನು ರಾಜಕೀಯದಲಿ ಮುಂದುವರೆದಿದ್ದೇನೆ ” ಎಂದು ಸಮಾಜದ ಭಾಂಧವರೊಂದಿಗೆ ತಮ್ಮ ಕುಟುಂಬದ ಬಾಂಧವ್ಯವನ್ನು ಜೇವರ್ಗಿ ಶಾಸಕ ಅಜಯ್ ಸಿಂಗ್ ನೆನಪಿಸಿಕೊಂಡರು.

ದಿವಂಗತ ಸಿದ್ದು ನ್ಯಾಮಗೌಡ ಹಾಗೂ ದಿವಂಗತ ಧರಂ ಸಿಂಗ್ ಅವರ ಪರಿಶ್ರಮ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಿಂದಾಗಿ ಗಾಣಿಗ ಸಮಾಜ ಪ್ರವರ್ಗ 2 ಎ ಗೆ ಸೇರಿಸಲು ಸಾಧ್ಯವಾಯಿತು ಎಂದರು. ಖರ್ಗೆ ಸಾಹೇಬರು ಹಾಗೂ ಧರಂಸಿಂಗ್ ಸಾಹೇಬರು ಈ ಭಾಗದ ಎರಡು ಕಣ್ಣುಗಳಿದ್ದಂತೆ. ಖರ್ಗೆ ಸಾಹೇಬರ ಅಭಿವೃದ್ದಿ ಕಾರ್ಯಗಳನ್ನು ನೋಡಿದರೆ ಅವರನ್ನು ಅವಿರೋಧ ಆಯ್ಕೆ ಮಾಡಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರಕಾರ 2014 ರ ಲೋಕಸಭಾ ಚುನಾವಣಾ ಪ್ರಣಾಳಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿ ಈ ಸಲವೂ ಕೂಡ ಮತ್ತದೇ ವಿಷಯಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಿ ದೇಶದ ಜನರ ದಾರಿ ತಪ್ಪಿಸುತ್ತಿದೆ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡರ ಅವರು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಂ ವೈ ಪಾಟೀಲ್, ಅಜಯ್ ಸಿಂಗ್ಜಿ ಹಾಗೂ ಆನಂದ ನ್ಯಾಮಗೌಡರ, ಗಾಣಿಗ ಸಮಾಜದ ಅಧ್ಯಕ್ಷ ರಾದ ಅಪ್ಪಾರಾಯ ಪಾಟೀಲ್, ಸವಿತಾ ಸಜ್ಜನ್, ಶಾಮರಾವ್ ಪ್ಯಾಟಿ ಸೇರಿದಂತೆ ಹಲವರು ಭಾಗವಹಿಸಿದ್ದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

11 hours ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

12 hours ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

12 hours ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

12 hours ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

13 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420