ಆರೋಗ್ಯ ವಿಜಯ’ ಸರಣಿ ಕಾರ್ಯಕ್ರಮ ಜೂ.15 ರಂದು

0
61

ಕಲಬುರಗಿ: ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನಕ್ಕೆ ಹನ್ನೊಂದರ ಹೊನಲು ಹಾಗೂ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಯವರ ಜನ್ಮಜ್ಯೋತಿಗೆ 40 ರ ಬೆಳಕು. ಸರಣಿ ಎರಡನೇ ಕಾರ್ಯಕ್ರಮ ಜೂನ್ 15 ರ ಬೆಳಗ್ಗೆ 10.30 ಕ್ಕೆ ನಗರದ ಗೋದುತಾಯಿ ನಗರದಲ್ಲಿರುವ ಮದರ್ ತೆರೆಸಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ಮೌಲ್ಯ ಶಿಕ್ಷಣದರಿವು’ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸಾರಂಗಮಠದ ಪೂಜ್ಯ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಚಾಲನೆ ನೀಡುವರು. ಸಾಹಿತಿ ಜಗನ್ನಾಥ ತರನಳ್ಳಿ ಉಪನ್ಯಾಸ ನೀಡಲಿದ್ದು, ಶಾಸಕ ಎಂ.ವೈ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲ ಹಂಗರಗಾ, ಜಿಪಂ ಮಾಜಿ ಸದಸ್ಯೆ ಜ್ಯೋತಿಲಕ್ಷ್ಮೀ ಸಂಜುಶೆಟ್ಟಿ, ಸಿದ್ದಣ್ಣಾ ಸಿಕೇದ್, ಕಾಲೇಜಿನ ಪ್ರಿನ್ಸಿಪಾಲ್  ಡಾ.ವನೀತಾ ಜಾಧವ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here