ಕಲಬುರಗಿ: ತಾಲ್ಲೂಕಿನ ಪಾಳಾ ಸುಭಾಷಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ್ ಟ್ರಸ್ಟ್ ವತಿಯಿಂದ ಕೊಡಮಾಡುವ ನಾಲ್ಕನೇ ವರ್ಷದ ಗೌಡ ಪ್ರಶಸ್ತಿ ಪ್ರದಾನ ಸಮಾರಂಭವು ನಗರದ ಕನ್ನಡ ಭವನದಲ್ಲಿ ಡಿಸೆಂಬರ್ ೨೭ರಂದು ಬೆಳಿಗ್ಗೆ ೧೦-೩೦ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಶರಣಗೌಡ ಪಾಟೀಲ್ ಪಾಳಾ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಹೊಸಮನಿಅವರಿಗೆ ಚಿನ್ನದ ಪದಕ ಹಾಗೂ ಅಕ್ಕಮಹಾದೇವಿ ಆಶ್ರಮದ ಪ್ರಭುದೇವ್ ಆಶ್ರಮದ ಪ್ರಭುಶ್ರೀ ತಾಯಿ ಅವರಿಗೆ ಬೆಳ್ಳಿ ಪದಕದೊಂದಿಗೆ ಗೌಡ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಹೇಳಿಕೆಯಲ್ಲಿ ಘೋಷಿಸಿದ್ದಾರೆ.
ಪತ್ರಕರ್ತರಾದ ಬಾಲಾಜಿ ಜೆ. ಚಿತ್ತೇಕರ್, ಶಂಕರ್ ಕೋಡ್ಲಾ, ಜಯತೀರ್ಥ ಪಾಟೀಲ್, ಸಾಹಿತಿಗಳಾದ ಡಾ. ಎಸ್.ಎಸ್. ಗುಬ್ಬಿ, ರತ್ನಾ ಕಾಳೇಗೌಡ, ಡಾ. ನಾಗಪ್ಪ ಗೋಗಿ, ಜೇವರ್ಗಿಯ ಶಮಸುದ್ದೀನ್ ಗುಂಡಗುರ್ತಿ, ವೀರೇಶ್ ಕಂದಗಲ್ ಹಾಗೂ ಬಸವರಾಜ್ ಮಾಹೂರ್, ಪ್ರಶಾಂತ್ ಗೋಲ್ಡ್ ಸ್ಮಿತ್ ಅವರೆಲ್ಲರಿಗೂ ಬೆಳ್ಳಿ ಪದಕದೊಂದಿಗೆ ಗೌಡ ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಇದೇ ವೇಳೆಯಲ್ಲಿ ಕಲ್ಯಾಣದ ಕಣ್ಮಣಿ, ಅವಿಸ್ಮರಣೀಯರು, ಗೌಡ ಕೃತಿಗಳ ಲೋಕಾರ್ಪಣೆ ಸಮಾರಂಭ ಸಹ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…