ಶಹಾಬಾದ: ಡಾ.ಬಿ.ಆರ್. ಅಂಬೇಡ್ಕರ್ ಅವರು ಜಾತಿವಾದಿ ಮನುಸ್ಮೃತಿಯನ್ನು ದಹನ ಮಾಡಿದ ದಿನದ ನಿಮಿತ್ತ ನಗರದಲ್ಲಿ ದಸಂಸ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶುಕ್ರವಾರ ನೆಹರು ವೃತ್ತದಲ್ಲಿ ಮನುಸ್ಮೃತಿ ಕೃತಿಯ ಪೋಸ್ಟರ್ ದಹಿಸಿದರು.
ಕರ್ನಾಟಕ ರಾಜ್ಯ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣಪ್ಪ ಕರಣಿಕ್ ಮಾತನಾಡಿ, ದೇಶದಲ್ಲಿ ಜಾತಿವಾದಿಗಳಿಂದ ಸಂವಿಧಾನಕ್ಕೆ ಅಪಾಯ ಕಾದಿದೆ.ಈಗಾಗಲೇ ಸಂವಿಧಾನ ಬದಲಾವಣೆಗಾಗಿ ನಾವು ಬಂದಿರುವುದು ಹಾಗೂ ಮನಸ್ಮೃತಿಯನ್ನು ಸಮರ್ಥನೆ ಮಾಡುವುದು ಕೇಂದ್ರ ಸಚಿವ ಅನಂತಕುಮಾರ ಅವರ ಹೇಳಿ, ಬಿಜೆಪಿ ಹಾಗೂ ಆರ್ಎಸ್ಎಸ್ ಅಜೆಂಡಾವನ್ನು ಹೊರಹಾಕಿದ್ದಾರೆ.ಅಲ್ಲದೇ ಇವರು ಆರಂಭದಿಂದ ಸಂವಿಧಾನ ವಿರೋಧಿಗಳಾಗಿದ್ದಾರೆ.ಅಲ್ಲದೇ ಜಾತ್ಯಾತೀತ ಭಾರತವನ್ನು ಮನುಭಾರವನ್ನಾಗಿ ಮಾಡಲು ಹೊರಟಿದ್ದಾರೆ.ಇದಕ್ಕೆ ಎಲ್ಲರೂ ಒಂದಾಗಿ ಸಂವಿಧಾನ ರಕ್ಷಣೆಗೆ ಹಾಗೂ ಜಾತಿವಾದಿ ತತ್ವಗಳ ವಿರುದ್ಧ ಹೋರಾಟ ನಡೆಸಬೇಕಿದೆ ಎಂದರು.
ದಸಂಸ ತಾಲೂಕಾ ಸಂಚಾಲಕ ಮಹಾದೇವ ತರನಳ್ಳಿ, ಶರಣು ಧನ್ನೇಕರ್,ಪ್ರವೀಣ ರಾಜನ್, ಭೀಮ ಆರ್ಮಿಯ ಸತೀಶ ಹುಗ್ಗಿ, ಮಲ್ಲಿನಾಥ ಮೇತ್ರೆ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…