ಡಿಸಿ ಸೋಮಲಿಂಗ ಗೆಣ್ಣೂರು ರಚಿಸಿದ ಅಂಬೇಡ್ಕರ್ ಮಾರ್ಗ ಗ್ರಂಥ ಲೋಕಾರ್ಪಣೆ

0
35

ಬೆಂಗಳೂರು: ಇಂದು ಬೆಂಗಳೂರಿನ ಬುಕ್ ಬ್ರಹ್ಮ ಅಂತರ್ಜಾಲ ಪುಸ್ತಕ ಪ್ರಕಾಶನ ಹಾಗೂ ಮಾರಾಟ ಕೇಂದ್ರದ ಕಚೇರಿಯಲ್ಲಿ ಬಾಗಲಕೋಟೆ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ರಚಿಸಿದ ಅಂಬೇಡ್ಕರ್ ಮಾರ್ಗ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಶಿಕ್ಷಣ ತಜ್ಞರಾದ ಪ್ರೊ. ಕೆ.ಇ ರಾಧಾಕೃಷ್ಣ ಅವರು ಈ ಸಂದರ್ಭದಲ್ಲಿ ಗ್ರಂಥ ಲೋಕಾರ್ಪಣೆ ಮಾಡಿದರು. ಕನ್ನಡ ಮತ್ತು ಸಂಸ್ಕೃತ ವಿದ್ವಾಂಸ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಹಿಂದಿನ ಕುಲಪತಿಳಾಗಿದ್ದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Contact Your\'s Advertisement; 9902492681

ಕಥೆಗಾರ ಚಿಂತಕ ಗುಲಬರ್ಗಾ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್, ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಪ್ರೊ. ಎಚ್. ಟಿ ಪೋತೆ ಅವರು ಸಂವಾದ ನಡೆಸಿದರು. ವೇದಿಕೆಯಲ್ಲಿ ಗ್ರಂಥ ರಚನೆಕಾರರು ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ  ಸುರಪುರ ಪ್ರಭು ಮತ್ತು ಬೋಹರಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್.ಎಚ್. ಹೊಸಮನಿ, ಚಿಂಚೋಳಿಯ ಸಿ.ಬಿ ಪಾಟೀಲ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಶ್ರೀಶೈಲ ನಾಗರಾಳ ಸೇರಿದಂತೆ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here