ಬಿಸಿ ಬಿಸಿ ಸುದ್ದಿ

ತೊಗರಿಗೆ ಪ್ರೋತ್ಸಾಹ ಧನ ಪ್ರಕಟಿಸಿ, ಉಸ್ತುವಾರಿ ಸಚಿವರು ಕಲಬುರಗಿಗೆ ಬರಲಿ: ಕಾಂಗ್ರೆಸ್

ಕಲಬುರಗಿ: ತೊಗರಿಗೆ ರಾಜ್ಯ ಸರ್ಕಾರ ಕೇಂದ್ರದ ಬೆಂಬಲ ಬೆಲೆಗೆ ತನ್ನ ಪ್ರೋತ್ಸಾಹ ನೀಡುತ್ತಾ ಬಂದಿದೆ, ಆದರೆ ಪ್ರಸಕ್ತವಾಗಿ ನಯಾಪೈಸೆ ನೀಡದೇ ಶೋಷಣೆ ಎಸಗಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್ ನೆಲೋಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಬಲ ಬೆಲೆಯಲ್ಲಿ ಖರೀದಿ ಆರಂಭವಾದ ವರ್ಷದಿಂದ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡುತ್ತಾ ಬಂದಿದೆ. ಆದರೆ ರೈತರ ಸರ್ಕಾರ ಎನ್ನುವ ರಾಜ್ಯ ಬಿಜೆಪಿ ಸರ್ಕಾರವೇ ರೈತರಿಗೆ ಬರೆ ಎಳೆದಿದೆ. ಪ್ರಸಕ್ತವಾಗಿ ಮೊದಲೇ ಶತಮಾನದ ಮೇಘಸ್ಫೋಟದಿಂದ ಅರ್ಧಕ್ಕಿಂತ ಹೆಚ್ಚಿನ ತೊಗರಿ ಹಾನಿಯಾಗಿದೆ. ಇಂತಹುದರಲ್ಲಿ ಪ್ರೋತ್ಸಾಹ ಧನ ನೀಡದೇ ಇರುವ ಧೋರಣೆಯಿಂದ ಹೊರ ಬಂದು ಈ ಕೂಡಲೇ ಕನಿಷ್ಟ 1500 ರೂ ಪ್ರೋತ್ಸಾಹ ಧನ ನಿಗದಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ತೊಗರಿ ಖರೀದಿ ಕೇಂದ್ರ ಆರಂಭ ಎನ್ನಲಾಗಿದೆ. ಆದರೆ ಎಲ್ಲೂ ಖರೀದಿಯೇ ಆರಂಭವಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಂತು ಕಲಬುರಗಿಯನ್ನೇ ಮರೆತ್ತಿದ್ದಾರೆ. ಹೊಸ ವರ್ಷದಂದು ಬರ್ತಾರೆಂದು ಹೇಳಲಾಗುತ್ತಿದೆ. ಕಲಬುರಗಿ ಗೆ ಬರುವಾಗ ಪ್ರೋತ್ಸಾಹ ಧನ ಪ್ರಕಟಿಸಿಯೇ ಬರಬೇಕು. ಖಾಲಿ ಕೈಯಲ್ಲಿ ಬರುವುದಾದರೆ ಬರದಿರುವುದೇ ಒಳಿತು. ಏನಾದರೂ ಜಿಲ್ಲೆ ಹಾಗೂ ತೊಗರಿ  ಮೇಲೆ ಕಾಳಜಿಯಿದ್ದರೆ ತೊಗರಿ ಕ್ವಿಂಟಾಲ್ ಗೆ 7500 ರೂ.ದಲ್ಲಿ ಖರೀದಿ ಮಾಡಲಿ ಎಂದು ಡಾ. ಅಜಯಸಿಂಗ್, ಅಲ್ಲಮಪ್ರಭು ಪಾಟೀಲ್ ಆಗ್ರಹಿಸಿದ್ದಾರೆ.

ಬಾಯಿ ಬಿಡದ ಬಿಜೆಪಿಗರು: ತೊಗರಿಗೆ ಪ್ರೋತ್ಸಾಹ ಧನ ನೀಡದಿರುವ ರಾಜ್ಯ ಸರ್ಕಾರದ ನಿರ್ಲಕ್ಷ್ಯ ವಿರುದ್ಧ ಬಿಜೆಪಿಯ ಯಾವೊಬ್ಬ ಜನಪ್ರತಿನಿಧಿ ಬಾಯಿ ಬಿಡ್ತಾ ಇಲ್ಲ. ಇದನ್ನು ನೋಡಿದರೆ ರೈತರ ಹಿತಾಸಕ್ತಿ ಬೇಕಿಲ್ಲ ಎಂಬುದಾಗಿ ನಿರೂಪಿಸುತ್ತದೆ ಎಂದಿದ್ದಾರೆ.

ಅತಿವೃಷ್ಟಿ ಹಾನಿಗೆ ಪರಿಹಾರ ಕೊಡುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ನಯಾ ಪೈಸೆ ಪರಿಹಾರ ನೀಡಿಲ್ಲ. ಕಿಸಾನ ಸಮ್ಮಾನ್ ಯೋಜನೆ ಅಡಿ ನೀಡಲಾಗಿವ 2000ರೂ ಪ್ರೋತ್ಸಾಹ ಧನಕ್ಕೆ ಅಬ್ಬರದ ಪ್ರಚಾರ ಮಾಡಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ವಿರುದ್ದ ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಜನರು ತಿರುಗಿ ಬಿದ್ದಿದ್ದರಿಂದ ಸರ್ಕಾರಗಳಿಗೆ ದಿಕ್ಕೇ ತೋಚುತ್ತಿಲ್ಲ ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ತೊಗರಿ ಪ್ರೋತ್ಸಾಹ ಧನಕ್ಕಾಗಿ ಸಿಎಂ ಬಳಿ ನಿಯೋಗ ಹೋಗುವುದಾಗಿ ಹೇಳಿದ್ದಾರೆ.ಜವಾಬ್ದಾರಿಯಿಂದ ನುಣುಚಿಕೊಳ್ಳಲು ನಿಯೋಗದ ನೆಪ ಹೇಳಿದ್ದಾರೆ.

ಪ್ರತಿವರ್ಷ ತೊಗರಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನ ನೀಡುತ್ತಾ ಬರಲಾಗಿದೆ. ಆದರೆ ಇದೇ ವರ್ಷ ನೀಡ್ತಾ ಇಲ್ಲ. ಹೀಗಾಗಿ ನೀಡಲೇಬೇಕೆಂದು ಸಿಎಂಗೆ ಹಾಗೂ ಕೃಷಿ ಸಚಿವರಿಗೆ ಹತ್ತು ದಿನಗಳ ಹಿಂದೆಯೇ ಭೇಟಿಯಾಗಬೇಕಿತ್ತು. ಬಿಜೆಪಿ ಶಾಸಕರಿಗೆ ರೈತರ ಹಿತಾಸಕ್ತಿ ಬೇಕಿಲ್ಲ. ಏನಿದ್ದರೂ ವೈಯಕ್ತಿಕ ಲಾಭದ ಕಡೆ ಆಸಕ್ತಿ ಕಡೆ ಲಕ್ಷ್ಯ ವಹಿಸಿದ ಪರಿಣಾಮ ಕಲ್ಯಾಣ ಕರ್ನಾಟಕ ಸಮಸ್ಯೆ ಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವಂತಾಗಿದೆ ಎಂದಿದ್ದಾರೆ.

ದಿವಾಳಿ ಸರ್ಕಾರ: ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದಲೇ ತೊಗರಿಗೆ ಪ್ರೋತ್ಸಾಹ ಧನ ನೀಡುತ್ತಿಲ್ಲ. ಅದೇ ರೀತಿ ಇತರ ಯೋಜಬೆಗಳಿಗೆ ಅನುದಾನ ನೀಡುತ್ತಿಲ್ಲ. ಚುನಾವಣೆಗಳಿಗೆ ತೋರುವ ಕಾಳಜಿ ಅಭಿವೃದ್ಧಿ ಕಾರ್ಯಗಳಿಗೆ ಆಸಕ್ತಿ ತೋರುತ್ತಿಲ್ಲ ಎಂದಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

34 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

37 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

40 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago