ಕೋವಿಡ್-19 ಹಿನ್ನೆಲೆ: ಸರಳವಾಗಿ ವಿಶ್ವಮಾನವ ದಿನಾಚರಣೆ

0
34

ಕಲಬುರಗಿ: ಕೋವಿಡ್-19 ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನದ ಪ್ರಯುಕ್ತ ವಿಶ್ವಮಾನವ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಕಲಬುರಗಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವೀರಭದ್ರಪ್ಪ ಸಿಂಪಿ ಹಾಗೂ ಸಾಹಿತಿಗಳಾದ ಡಾ. ಸ್ವಾಮಿರಾವ ಕುಲಕರ್ಣಿ, ಡಾ. ಚಿ.ಸಿ. ಸಿಂಗಣ್ಣ, ಸುರೇಶ ಬಡಿಗೇರ, ಸಂಗಮನಾಥ ರೇವಂತಗಾಂವ, ವೆಂಕಟೇಶ ನೀರಳಗಿ, ಡಾ. ಶ್ರೀಶೈಲ್ ನಾಗೋಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here