ಸುರಪುರ ತಾಲೂಕು ಗ್ರಾಮ ಪಂಚಾಯತಿ ಫಲಿತಾಂಶ : ಕಾಂಗ್ರೆಸ್ ಬೆಂಬಲಿತರ ಮೇಲು ’ಗೈ’

ಸುರಪುರ: ತಾಲೂಕಿನ ಎಲ್ಲಾ ೨೧ ಗ್ರಾಮ ಪಂಚಾಯತಿಗಳ ೩೮೩ ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು ಈಬಾರಿ ಸುರಪುರ ತಾಲೂಕಿನ ಬಹುತೇಕ ಗ್ರಾಮ ಪಂಚಾಯತಿಗಳು ಕೈ ಬೆಂಬಲಿತರ ವಶವಾಗಿವೆ.

ಕಳೆದ ೨೨ ರಂದು ಚುನಾವಣೆ ನಡೆದಿದ್ದ ೨೦ ಗ್ರಾಮ ಪಂಚಾಯತಿಗಳಲ್ಲಿನ ೩೮೩ ಸ್ಥಾನಗಳಲ್ಲಿ ೨೧೪ ಸ್ಥಾನ ಕಾಂಗ್ರೆಸ್ ಬೆಂಬಲಿತರು ಗೆಲ್ಲುವ ಮೂಲಕ ಕಾಂಗ್ರೆಸ್ ೧೩ ಗ್ರಾಮ ಪಂಚಾಯತಿಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಮೇಲು ಗೈ ಸಾಧಿಸಿದೆ. ಅಲ್ಲದೆ ಒಟ್ಟು ೩೮೩ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ೨೧೪ ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಶಕ್ತಿಯನ್ನು ಪ್ರದರ್ಶಿಸಿದೆ.

ಇನ್ನು ಆಡಳಿತರೂಢ ಬಿಜೆಪಿ ಪಕ್ಷದ ಬೆಂಬಲಿತರು ೧೨೧ ಜನರು ಆಯ್ಕೆಯಾಗಿದ್ದು ತಾಲೂಕಿನ ೦೬ ಗ್ರಾಮ ಪಂಚಾಯತಿಗಳನ್ನು ತನ್ನದಾಗಿಸಿಕೊಂಡಿದೆ.ಅಲ್ಲದೆ ಬಿಜೆಪಿ ಪಕ್ಷದ ಬೆಂಬಲಿಗರು ತಾಲೂಕಿನ ೬ ಗ್ರಾಮ ಪಂಚಾಯತಿಗಳಲ್ಲಿ ಒಂದೂ ಸ್ಥಾನವನ್ನು ಗೆಲ್ಲದಿರುವುದು ಆಶ್ಚರ್ಯಕರ ಎನಿಸಿದೆ.

ಅಲ್ಲದೆ ಜೆಡಿಎಸ್ ಕೂಡ ಕೆಲವು ಗ್ರಾಮ ಪಂಚಾಯತಿಗಳಲ್ಲಿ ತನ್ನ ಪಾರುಪತ್ಯ ಮೆರೆದಿದ್ದು ಯಕ್ತಾಪುರ ಗ್ರಾಮ ಪಂಚಾಯತಿಯ ೨೫ ಸ್ಥಾನಗಳಲ್ಲಿ ೨೩ ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ.ತಾಲೂಕಿನಲ್ಲಿ ಒಟ್ಟು ೪೮ ಜನ ಜೆಡಿಎಸ್ ಬೆಂಬಲಿಗರು ಜಯ ಸಾಧಿಸಿದ್ದಾರೆ.

ಇನ್ನು ತಾಲೂಕಿನ ಅರಳಹಳ್ಳಿ ಗ್ರಾಮದ ಶ್ರವಣಕುಮಾರ ಎಂಬುವವರು ಒಂದು ಮತದ ಅಂತರದಿಂದ ಜಯಗಳಿಸಿದರೆ ತಾಲೂಕಿನ ಬಾದ್ಯಾಪುರ ಗ್ರಾಮದ ಮಹಿಳೆ ಶಿವಮಗ್ಗೆಮ್ಮ ಚೆನ್ನೂರ ಎಂಬುವವರು ಸತತ ೩ನೇ ಬಾರಿ ಗೆಲುವು ಸಾಧಿಸುವ ಮೂಲಕ ಹಳ್ಳಿ ರಾಜಕಾರಣದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇನ್ನು ನೂತನ ಗ್ರಾಮ ಪಂಚಾಯತಿಯಾದ ಬಾದ್ಯಾಪುರ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತರು ೭ ಜನ ಹಾಗು ಬಿಜೆಪಿ ಬೆಂಬಲಿತ ೭ ಜನರು ಆಯ್ಕೆಯಾಗುವ ಮೂಲಕ ಸಮಬಲ ಸಾಧಿಸಿದ್ದಾರೆ.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420