ಸಾಹಿತ್ಯ ಶ್ರೀಮಂತಗೊಳಿಸಿದ ನಾಡಿನ ಸಾಂಸ್ಕೃತಿಕ ರಾಯಭಾರಿ ಕುವೆಂಪು

0
93

ಶಹಾಬಾದ: ನಾಡಿನ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಈ ನಾಡಿನ ಸಾಂಸ್ಕೃತಿಕ ರಾಯಭಾರಿ ಕುವೆಂಪು ಎಂದು ಕಲಬುರಗಿ ಗ್ರಾಮೀಣ ಕಸಾಪ ಅಧ್ಯಕ್ಷ ಶರಣಗೌಡ ಪಾಟೀಲ ಹೇಳಿದರು.

ಅವರು ಶನಿವಾರ ನಗರದ ಕನ್ನಡ ಭವನದಲ್ಲಿ ಕಸಾಪ ಕಲಬುರಗಿ ಗ್ರಾಮೀಣ ವಲಯದಿಂದ ಆಯೋಜಿಸಲಾದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದ ಮಾತನಾಡಿದರು.

Contact Your\'s Advertisement; 9902492681

ಈ ನಾಡಿನ ಸಾಹಿತ್ಯ ಕ್ಷೇತ್ರದ ಶಾಶ್ವತ ನಾಯಕ ಕುವೆಂಪು ಎಂಬ ಸಂಗತಿಯನ್ನು ಕನ್ನಡ ಮನಸ್ಸುಗಳು ಅಂಗೀಕರಿಸಿದ್ದು ಬೇರೆ ಯಾವ ಸಾಹಿತಿಗೂ ಸಿಗದ ಗೌರವ ಕುವೆಂಪು ಅವರಿಗೆ ಶ್ರೀ ಸಾಮಾನ್ಯರಿಂದ ಸಿಕ್ಕಿದೆ.ಕಾರಣ ಅವರು ಕರ್ನಾಟಕ ರತ್ನ , ರಾಷ್ಟ್ರ ಕವಿ ಸೇರಿದಂತೆ ಅನೇಕ ಬಿರುದುಗಳನ್ನು ಪಡೆದಿರುವುದಕ್ಕೆ ಅಲ್ಲ. ಅವರು ತಮ್ಮ ಸಾಹಿತ್ಯದಲ್ಲಿ ಹೃದಯವಂತಿಕೆ, ವಿಶಾಲವಾದ ಮನೋಭಾವನೆ, ಮಾನವೀಯ ಮೌಲ್ಯಗಳನ್ನು ರಚಿಸಿದಕ್ಕೆ. ಅವರು ತಮ್ಮ ಅನಿಕೇತನ ಕವನದಲ್ಲಿ ವಿಶ್ವಮಾನವ ತತ್ವವನ್ನು ಹೇಳುವುದರ ಮೂಲಕ ಎಲ್ಲರ ಹೃದಯದಲ್ಲಿ ವಿರಾಜಮಾನರಾಗಿ ಉಳಿದಿದ್ದಾರೆ.

ಕಸಾಪ ನಗರಾಧ್ಯಕ್ಷ ಮಲ್ಲಿಕಾಜರ್ುನ ಪೂಜಾರಿ, ಕುವೆಂಪು ಅವರ ಕವಿತೆಯ ತಿರುಳನ್ನು ತಿಳಿದುಕೊಂಡರೆ ನಮ್ಮ ನಿಮ್ಮ ಮುಂದೆ ಮತ್ತೊಬ್ಬ ಬುದ್ಧ, ಅಂಬೇಡ್ಕರ್, ಬಸವಣ್ಣನವರನ್ನು ಕಾಣಬಹುದು.ಇಂದಿನ ಪ್ರಸ್ತುತ ದಿನಮಾನಗಳಲ್ಲಿ ಮಠಾಧೀಶರು, ರಾಜಕೀಯ ವ್ಯಕ್ತಿಗಳು ಸಂಕುಚಿತ ಮನೋಭಾವನೆಯಿಂದ ಮಾನವೀಯ ಮೌಲ್ಯಗಳು ಕಳೆದುಕೊಳ್ಳುತ್ತಿವೆ. ತಮ್ಮ ಸ್ವಾರ್ಥಕೋಸ್ಕರ ಒಂದು ಜಾತಿ, ಧರ್ಮಕ್ಕೆ ಅಂಟಿಕೊಂಡು ಒಡೆದಾಳು ನೀತಿಯನ್ನು ಅನುಸರಿಸುತ್ತಿದ್ದಾರೆ. ಈ ಸಂಕುಚಿತ ಮನೋಭಾವನೆಯಿಂದ ಮಾನವ ದಾನವವಾಗುತ್ತಾನೆ ಹೊರತು ವಿಶ್ವಮಾನವನಾಗಲು ಸಾಧ್ಯವಿಲ್ಲ. ವಿಶ್ವಮಾನವನಾಗಲು ಕುವೆಂಪು ಅವರು ಹೇಳಿದಂತೆ ಧರ್ಮ, ಜಾತಿ ಸಂಕೋಲೆಗಳ ಬಂಧನದಿಂದ ಮುಕ್ತರಾಗಿ ನನ್ನದು ಎಂಬ ಹೃದಯ ವೈಶ್ಯಾಲತೆಯ ಮನೋಭಾವನೆ ಬಂದಾಗ ಮಾತ್ರ ವಿಶ್ವಮಾನವರಾಗಲು ಸಾಧ್ಯ.ಅದಕ್ಕಾಗಿ ಕುವೆಂಪು ಅವರ ಸಾಹಿತ್ಯವನ್ನು ಅಧ್ಯಯನ ಮಾಡುವ ಅಗತ್ಯತೆ ಎಂದಿಗಿಂತಲೂ ಇಂದು ಅಗತ್ಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ತಾಲೂಕಾಧ್ಯಕ್ಷ ಮೃತ್ಯುಂಜಯ್ ಹಿರೇಮಠ ಮಾತನಾಡಿ, ಕುವೆಂಪು ಅವರಂತೆ ನೇರವಾಗಿ, ದಿಟ್ಟವಾಗಿ ಪುರೋಹಿತಶಾಹಿಯನ್ನು ವಿರೋಧಿಸಿ ಬರೆದ ಕವಿ, ದಾರ್ಶನಿಕರು ಕನ್ನಡ ನಾಡಿನಲ್ಲಿ ಬೆರಳಣಿಯಷ್ಟೇ. ಈ ನಾಡಿನ ನೊಂದ ವರ್ಗದ ದನಿಯಾಗಿ ರೈತರ ಪರವಾಗಿ ದಿಟ್ಟದನಿ ಎತ್ತಿದ ಕುವೆಂಪು ಸಾಹಿತ್ಯವನ್ನು ಪ್ರತಿಯೊಬ್ಬರು ಓದಿ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಉದ್ದಿಮೆದಾರ ಶಿವಕುಮಾರ ಇಂಗಿನಶೆಟ್ಟಿ ಹಾಗೂ ಶರಣಗೌಡ ಪಾಟೀಲ ಗೋಳಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಹೇಬಗೌಡ ಬೋಗುಂಡಿ,ಸಂತೋಷ ದೊಡ್ಡಮನಿ, ಶಂಕರ ಕೋಟನೂರ, ಮರಲಿಂಗ ಕಮರಡಗಿ, ಶಾಂತಪ್ಪ ಹಡಪದ, ಅರುಣ ಜಾಯಿ, ನಾಗಪ್ಪ ರಾಯಚೂರಕರ್, ಬಸವರಾಜ ಮಯೂರ, ರವಿ ಬೆಳಮಗಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here