ನಿಧನ ವಾರ್ತೆ: ಗುರಣ್ಣ ಸೊಡ್ಡೆ

0
21

ವಾಡಿ: ಪಟ್ಟಣದ ಶ್ರೀಶೈಲ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಸ್ಥೆಯ ಸಹ ಕಾರ್ಯದರ್ಶಿ, ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಗುರಣ್ಣ ಸೊಡ್ಡೆ (72) ಗುರುವಾರ ನಿಧನರಾದರು.

ಮೃತರಿಗೆ ಪತ್ನಿ, ಪುತ್ರಿ, ಇಬ್ಬರು ಪುತ್ರರು ಹಾಗೂ ಅಪಾರ ಬಂದು ಬಳಗ ಇದ್ದಾರೆ. ಶುಕ್ರವಾರ ಮದ್ಯಾಹ್ನ 1:00 ಗಂಟೆಗೆ ಪಟ್ಟಣದ ವೀರಶೈವ ಲಿಂಗಾಯತ ಸಮಾಜದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೇರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Contact Your\'s Advertisement; 9902492681

ಸಂತಾಪ: ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಸಿದ್ದಣ್ಣ ಕಲಶೆಟ್ಟಿ, ಶ್ರೀಶೈಲ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಕಲ್ಯಾಣರಾವ ಶೆಳ್ಳಗಿ, ಮಲ್ಲಿಕಾರ್ಜುನ ದೇವಸ್ಥಾನ ಸಮಿತಿ ಅಧ್ಯಕ್ಷ ಶಾಂತಪ್ಪ ಶೆಳ್ಳಗಿ ಹಾಗೂ ಸಮಾಜದ ಪದಾಧಿಕಾರಿಗಳು ಮೃತರ ನಿಧನಕ್ಕೆ ಶೋಕ ಸಂತಾಪ ಸೂಚಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here