ಕಲಬುರಗಿ: ಗೋವಾದ ಬಿಚೋಲಿ೦ ನ ಹೀರಾಬಾಯಿ ಸಭಾಂಗಣದಲ್ಲಿ ಜೂನ್ 16 ರಂದು 11 ನೇ ಹೊರನಾಡು ಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಕರುನಾಡು ಪದ್ಮಶ್ರೀ ಪ್ರಶಸ್ತಿಗೆ ಶ್ರೀ ಷ.ಬ್ರ. ರೇವಣಸಿದ್ದ ಶಿವಾಚಾರ್ಯರು ಆಯ್ಕೆಯಾಗಿದ್ದಾರೆಂದು ಎಂದು ಕರ್ನಾಟಕ ಜಾಗೃತಿ ವೇದಿಕೆಯ ಅಧ್ಯಕ್ಷ ಶಿವಾ ಬಾಲಸ್ವಾಮಿ ಮಹೇಶ್ ಬಾಬು ಸುರ್ವೆ ಅವರು ಹೇಳಿದರು.
ಗೋವಾದ ಕರ್ಮಭೂಮಿ ಕನ್ನಡ ಸಂಘ ಹಾಗೂ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಅದ್ದೂರಿಯಾಗಿ ಈ ಸಾಂಸ್ಕೃತಿಕ ಸಮ್ಮೇಳನವನ್ನು ಆಯೋಜಿಸಲಾಗಿದೆ ಕಾರ್ಯಕ್ರಮದಲ್ಲಿ ಶ್ರೀನಿವಾಸ ಸರಡಗಿಯ ಶ್ರೀ ಗುರು ಚಿಕ್ಕ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಷ.ಬ್ರ. ರೇವಣಸಿದ್ದ ಶಿವಾಚಾರ್ಯರು ಕರುನಾಡು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಗೋವಾದ ಕರ್ಮಭೂಮಿ ಕನ್ನಡ ಸಂಘ ಹಣಮಂತ ರೆಡ್ಡಿ ಶಿರೂರ್ ಪ್ರಕಟಣೆಗೆ ತಿಳಿಸಿದ್ದಾರೆ.