ಚುನಾಯಿತ್ ಸದಸ್ಯರು ಗ್ರಾಮದ ಅಭಿವೃದ್ಧಿಗೆ ಶ್ರಮಿಸುವಂತಗಾಲಿ: ಆನಂದ

0
23

ಕಲಬುರಗಿ: ಗ್ರಾಮ ಸಭೆಗಳಲ್ಲಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ, ಕ್ರಾಂತಿಕಾರಕ ಬದಲಾವಣೆಗೆ ಶ್ರಮಿಸುವಂತಾಗಲಿ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ದ  ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು,  ಹೊಗಳಿಕೆ ಮಾತುಗಳಿಗೆ ಮಾರು ಹೋಗದೇ ಟೀಕೆ ಮಾಡುವವರಿಗೆ ಅಭಿವೃದ್ಧಿ ಕೆಲಸಗಳ ಮೂಲಕ ಉತ್ತರ ನೀಡಬೇಕು.

Contact Your\'s Advertisement; 9902492681

ಸರ್ಕಾರದ ಯೋಜನೆಗಳನ್ನು ಮತ್ತು ಸುತ್ತೋಲೆಗಳನ್ನು ಜನತೆಗೆ ತಿಳಿಸಬೇಕು. ಹಳ್ಳಿಗಳಿಗೆ ಅಗತ್ಯವಿರುವ ಶುದ್ಧ ಕುಡಿಯುವ ನೀರು, ಉತ್ತಮ ರಸ್ತೆ, ಚರಂಡಿ ವ್ಯವಸ್ಥೆ ಸಹಿತ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬೇಕು ಎಂದು ನೂತನ ಸದಸ್ಯರಿಗೆ ಮನವಿ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here