ಇಂದಿನಿಂದ ಕಾಲೇಜು ಪ್ರಾರಂಭ ವಿದ್ಯಾರ್ಥಿಗಳಿಗೆ ಟೆಸ್ಟ್

0
172

ಶಹಾಪುರ :ರಾಜ್ಯ ಸರ್ಕಾರದ ಆದೇಶದಂತೆ ಇಂದು ಪದವಿಪೂರ್ವ ಕಾಲೇಜುಗಳು ಪ್ರಾರಂಭಗೊಂಡ ಹಿನ್ನಲೆಯಲ್ಲಿ ಥರ್ಮಲ್ ಗನ್ನಿನಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಕೊರೊನಾ ತಪಾಸಣಾ ಮಾಡಿ ತರಗತಿಗಳಿಗೆ ಅವಕಾಶ ಕಲ್ಪಿಸಲಾಯಿತು.

ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಾದ ರಾಮಚಂದ್ರರಾವ್ ಗುಂಡೆಕಾರ್ ರವರು ವಿದ್ಯಾರ್ಥಿಗಳಿಗೆ ಕೊರೊನಾದ ಬಗ್ಗೆ ಜಾಗೃತಿವಹಿಸಿ ಸಾಮಾಜಿಕ ಅಂತರ ಕಾಪಾಡಿ ಕೊಳ್ಳುವುದರ ಮುಖಾಂತರ ಆಗಾಗ ಕೈ ತೊಳೆದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

Contact Your\'s Advertisement; 9902492681

ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಪಾಲಕರು ಹಾಗೂ ಪೋಷಕರಿಂದ ಕಡ್ಡಾಯವಾಗಿ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡು ಬರಬೇಕು ಹಾಗೂ ಪ್ರತ್ಯೇಕವಾಗಿ ಕುಡಿಯುವ ನೀರು ವ್ಯವಸ್ಥೆ ವಿದ್ಯಾರ್ಥಿಗಳೇ ಮನೆಯಿಂದ ತಯಾರಿ ಮಾಡಿಕೊಂಡು ಬರಬೇಕು ಎಂದು ಹೇಳಿದರು ಈ ಸಂದರ್ಭದಲ್ಲಿ ಉಪನ್ಯಾಸಕರಾದ ಪಂಪಣ್ಣ ಶಿರಣಿ, ದೇವಿಂದ್ರಪ್ಪ ಕಟ್ಟಿಮನಿ, ಡಾ:ರವೀಂದ್ರನಾಥ ಹೊಸ್ಮನಿ, m ವರ್ಷ, ಅಶ್ವಿನಿ,ಶಿವರಾಜ್ ಬೀರನೂರ್ ಹಾಗೂ ಇತರರು ಉಪಸ್ಥಿತರಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here