ಬೆಂಗಳೂರು: ಪ್ರಜಾಪ್ರಭುತ್ವ ಉಳಿಯಬೇಕಾದರೆ ಬಿಬಿಎಂಪಿ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್ ಆಗ್ರಹಿಸಿದರು.
ಶನಿವಾರ ನಡೆದ ಪ್ರತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಪ್ರಪಂಚದ ಅನೇಕ ಮುಂದುವರೆದ ರಾಷ್ಟ್ರಗಳು ಮತ್ತೆ ಮರಳಿ ಬ್ಯಾಲೆಟ್ ಪೇಪರ್ಗೆ ಮರಳಿ ಬಂದಿವೆ ಆದರೂ ನಮ್ಮಲ್ಲಿ ಏಕೆ ಇದು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.
120 ದೇಶಗಳಲ್ಲಿ ನಿಷೇದಕ್ಕೆ ಒಳಗಾದ ಇವಿಎಂ ಯಂತ್ರ ನಮ್ಮಲ್ಲಿ ಏಕೆ? ನಾವೇನು ತಂತ್ರಜ್ಞಾನದ ವಿರೋಧಿಗಳಲ್ಲ ಆದರೆ ವ್ಯವಸ್ಥೆಗೆ ಮಾರಕವಾಗುವ ತಂತ್ರಜ್ಞಾನ ನಮಗೆ ಬೇಕೆ ಎನ್ನುವ ಪ್ರಶ್ನೆ ನಮ್ಮದಾಗಿದೆ ಎಂದರು.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಧಿಕೃತವಾಗಿ ಎಷ್ಟು ಮತಗಳು ಬಿದ್ದಿವೆ ಎನ್ನುವ ಸ್ಪಷ್ಟ ಅಂಕಿ ಅಂಶವನ್ನು ಕೇಂದ್ರ ಚುನಾವಣಾ ಆಯೋಗ ವರ್ಷಗಳಾಗುತ್ತಾ ಬಂದರೂ ನೀಡಿಲ್ಲ. ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಈಗಾಗಲೇ ನೂರಾರು ದೂರು ದಾಖಲಾಗಿದೆ, ಇಷ್ಟೇಲ್ಲಾ ಅನುಮಾನದಲ್ಲಿ ಇವಿಎಂ ಮೂಲಕ ಚುನಾವಣೆ ನಡೆಸಬೇಕೆ ಎಂದು ಪ್ರಶ್ನಿಸಿದರು.
ಇವಿಎಂ ಇದೇ ರೀತಿ ಎಲ್ಲಾ ಚುನಾವಣೆಗಳಲ್ಲೂ ಮುಂದುವರೆದರೆ ನಮ್ಮ ದೇಶ ಸರ್ವಾಧಿಕಾರಿಗಳ ಹಿಡಿತಕ್ಕೆ ಹೋಗುವುದರಲ್ಲಿ ಅನುಮಾನವೇ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…