ಬಳ್ಳಾರಿ: ದೇಶಪ್ರೇಮಿ ಯುವಾಂದೋಲನ ವತಿಯಿಂದ ಹಳ್ಳಿಗಳಿಗೆ ವಿದ್ಯಾರ್ಥಿ ಯುವಜನರ ಸೈಕಲ್ ಜಾಥಾಗೆ 3ನೇ ದಿನ ಎಮ್ಮಿಗನೂರಿನಿಂದ ಆರಂಭಗೊಂಡಿತು.
ಇಂದು ಸಾವಿತ್ರಿ ಬಾಯಿ ಫುಲೆ ಜಯಂತಿಯ ಅಂಗವಾಗಿ ಬರಗೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ಪೀರ್ ಭಾಷಾ, ಸಾಹಿತಿಗಳು ಭಾಗವಹಿಸಿದ್ದರು.
ನಂತರ ಸೈಕಲ್ ಜಾಥಾ ತಂಡ ಹೊರಟು, ಎಮ್ಮಿಗನೂರು, ನೆಲ್ಲುಡಿ ಕೊಟ್ಟಾಲ್, ಕಂಪ್ಲಿ, ಕಂಪ್ಲಿ ಕೋಟೆ, ಡಣಾಪುರ, ಹೆಬ್ಬಾಳ, ಮುಷ್ಟೂರು, ಕುಂಟೋಜಿ, ಬರಗೂರು ಗ್ರಾಮದ ಬೀದಿ ಬೀದಿ ಗಳಲ್ಲಿ ಹೋರಾಟ ಗೀತೆಯನ್ನು ಹಾಡಿ, ಕರಪತ್ರಗಳನ್ನು ಹಂಚಿ ಗ್ರಾಮಸ್ಥರಿಗೆ ರೈತವಿರೋಧಿ ಕಾಯ್ದೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಜನರೊಂದಿಗೆ ಚರ್ಚೆಗಳು ನಡೆದವು ಮತ್ತು ದಾರಿ ಉದಕ್ಕೂ ಹೊಲಗಳ್ಳಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಕರಪತ್ರಗಳನ್ನು ಹಂಚಿ ಸರ್ಕಾರ ತರುತ್ತಿರುವ ರೈತ ವಿರೋಧಿ ಕಾನೂನುಗಳ ಬಗ್ಗೆ ಮಾಹಿತಿ ನೀಡಲಾಯಿತು.ಮತ್ತು ಇಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರಚಾರಾಂದೋಲನ ಮುಗಿಸಿ ಕೊಪ್ಪಳ ಜಿಲ್ಲೆಯ ಕಡೆಗೆ ಹೊರಟಿತು.
ಜಾಥಾದಲ್ಲಿ ದೇಶಪ್ರೇಮಿ ಯುವಾಂದೋಲನದ ಸಂತೋಷ ಎಚ್. ಎಂ, ರಾಜೇಂದ್ರ ರಾಜವಳ, ಗುರುಬಸವ, ಮರಿಸ್ವಾಮಿ, ದುರ್ಗೇಶ್, ಶರಣು, ಚಿದಾನಂದ, ಇಸ್ಮಾಯಿಲ್, ಭುವನ್ ಕುಮಾರ್ ಮತ್ತು ಕರ್ನಾಟಕ ಜನಶಕ್ತಿಯ ವಸಂತ್ ರಾಜ್ ಕಹಳೆ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…