ಕಲಬುರಗಿ: ಸೇಡಂನ ಮಾಜಿ ಶಾಸಕ, ಹಿರಿಯ ಧುರೀಣರು, ರಾಜಕೀಯ ಮುತ್ಸದ್ದಿಯಾಗಿದ್ದ ಬಸವಂತರೆಡ್ಡಿ ಪಾಟೀಲ್ ಮೋತಕಪಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮೋತಕಪಲ್ಲಿ ಗ್ರಾಮದ ಸ್ವಂತ ಜಮೀನಿನಲ್ಲಿ ಮಧ್ಯಾಹ್ನ 3 ಗಂಟೆಗೆ ನೆರೆವೆರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬಸವಂತರೆಡ್ಡಿ ಪಾಟೀಲ್ ಅವರು ಈ ಹಿಂದೆ ಎರಡು ಬಾರಿ ಶಾಸಕರಾಗಿದ್ದರು.