ಕಲ್ಯಾಣ ಕರ್ನಾಟಕದ ರಚನಾತ್ಮಕ ಪ್ರಗತಿಗೆ ಒತ್ತಾಯಿಸಿ ಬಸವರಾಜ ಪಾಟೀಲ ಸೇಡಂ ಅವರಿಗೆಪ್ರಸ್ತಾವನೆ ಸಲ್ಲಿಕೆ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ನಿಯೋಗ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷಣ ದಸ್ತಿ ಅವರ ನೇತೃತ್ವದಲ್ಲಿ ಇಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ ಸೇಡಂ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಲ್ಯಾಣ ಕರ್ನಾಟಕದ ರಚನಾತ್ಮಕ ಪ್ರಗತಿಯ ಬಗ್ಗೆ ಮತು ಆರ್ಟಿಕಲ್ 371ನೇ(ಜೆ) ಕಲಾಂ ಅನುಷ್ಠಾನದ ಕುರಿತು ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಯಿತು.

ಹೈದ್ರಾಬಾದ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ನಿಯೋಗದಿಂದ ಸಂಘದ ಅಧ್ಯಕ್ಷರಿಗೆ ಒಟ್ಟು 371 ಜೆ ಕಲಾಂಗೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಒಟ್ಟು 7 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಘದ ಅಧ್ಯಕ್ಷರಿಗೆ ಪ್ರಸ್ತಾವನೆ ಸಲ್ಲಿಸಿ ಆಗ್ರಹಿಸಿದರು.

ಸಮಿತಿಯ ಪ್ರಸ್ತಾವನೆಗೆ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಸಕರಾತ್ಮಕವಾಗಿ ಸ್ಪಂದಿಸಿ ಸಂಘದ ವ್ಯಾಪ್ತಿಗೆ ಸಂಬಂಧಪಟ್ಟ ಸಲಹೆಗಳು ಮತ್ತು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿರುವುದಲ್ಲದೆ ರಾಜ್ಯ ಮತ್ತು ಕೇಂದ್ರಸರಕಾರಕ್ಕೆ ಸಂಬಂಧಿಸಿದ ಭಾಗದ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗೆ ಸಮಿತಿ ಕೋರಿರುವಂತೆ ಒತ್ತಡ ತರುವ ಎಲ್ಲಾ ಪ್ರಯತ್ನಗಳು
ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಲಕ್ಷ್ಮಣ ದಸ್ತಿ ಅವರು ತಿಳಿಸಿದ್ದಾರೆ.

371ನೇ (ಜೆ)ಯಲ್ಲಿನ ದ್ವಂದ್ವ ಅರ್ಥದ ವಿಷಯಗಳ ನಿವಾರಣೆಯ ಬಗ್ಗೆ ಮತ್ತುನಿಯಮಗಳಲ್ಲಿ ಅನುಷ್ಠಾನಕ್ಕೆ ಆಗುತ್ತಿರುವ ದೋಷಗಳ ಬಗ್ಗೆ ಸರಿಪಡಿಸಲು ಮತ್ತು 371ನೇ(ಜೆ)ಕಲಂ ನಿಯಮದಲ್ಲಿ ಉಲ್ಲೇಖಿಸಿರುವಂತೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಅನುಕೂಲವಾಗುವ ರೀತಿಯಲ್ಲಿ ಹೊಸ ನಿಯಮಾವಳಿಗಳನ್ನು ರಚಿಸಿ ಸರಕಾರದ ಅನುಮೋದನೆಯ ಮೇರೆಗೆ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ವಿವರಿಸಲಾಯಿತು.

371ನೇ(ಜೆ) ಪರಿಣಾಮಕಾರಿ ಅನುಷ್ಟಾನಕ್ಕೆ ಹೊಸ ನಿಯಮಗಳ ಕರಡು ಸಿದ್ಧಪಡಿಸಲುಕಲ್ಯಾಣ ಕರ್ನಾಟಕದ ಪರಿಣಿತ 3-4 ಹೋರಾಟಗಾರರನ್ನೊಳಗೊಂಡು ಕಾನೂನು ಮತ್ತುಡಿ.ಸಿ.ಎ.ಆರ್.ಕಾರ್ಯದರ್ಶಿಗಳನ್ನು ಸೇರಿಸಿ ಕರಡು ಸಮಿತಿಯನ್ನು ರಚಿಸಿ ಹೊಸ ನಿಯಮಗಳ ಕರಡು ಕಾಲಮಿತಿಯಲ್ಲಿ ರಚಿಸಲು ಸರಕಾರದಿಂದ ಅನುಮೋದನೆ ಪಡೆಯಲು ಪ್ರಸ್ತಾವನೆ
ಸಲ್ಲಿಸಲಾಯಿತು.

371ನೇ (ಜೆ)ಕಲಾಂ ನಡಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ,ವಿಶೇಷ ಕೋಶ ಕಚೇರಿಯ ಪ್ರಾದೇಶಿಕ ಕಚೇರಿ ಕಲಬುರಗಿಯಲ್ಲಿ ಸ್ಥಾಪನೆ ಮಾಡಲು ಪ್ರಸ್ತಾವನೆ ಸಲ್ಲಿಸಿ ವಿವರಿಸಲಾಯಿತು.

371ನೇ(ಜೆ) ಕಲಂ ಖಂಡಿಕೆ 12, 13 ರಂತೆ ಸಂಬಂಧಿಸಿದ ಎಲ್ಲಾ ಕಚೇರಿಗಳುವಿಭಾಗಿಯ ಕೇಂದ್ರ ಕಲಬುರಗಿಯಲ್ಲಿ ಸ್ಥಳಾಂತರ ಮಾಡಲು, ಕಲ್ಯಾಣ ಕರ್ನಾಟಕೇತರ ಪ್ರದೇಶದಲ್ಲಿ ನೀಡಬೇಕಾದ ಮೀಸಲಾತಿ ಕಟ್ಟುನಿಟ್ಟಾಗಿನೀಡಲು ಆದೇಶಿಸಿರುವಂತೆ ತಕ್ಷಣ ಕ್ರಮ ಜರುಗಿಸಲು ಹಾಗೂ ಕಲಬುರಗಿಯ ರೈಲ್ವೆ ವಿಭಾಗಿಯ ಕಚೇರಿ, ಏಮ್ಸ್, ನೀಮ್ಝ್ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಕೇಂದ್ರದ ಮೇಲೆ ಒತ್ತಡ ತರಲುಮನವರಿಕೆ ಮಾಡಲಾಯಿತು.

ಮನೀಷ್ ಜಾಜು, ಪ್ರೊ. ಬಸವರಾಝ್ ಕುಮನೂರ, ಪ್ರೊ. ಸಂಗೀತಾ ಕಟ್ಟಿ, ಲಿಂಗರಾಜ ಸಿರಗಾಪೂರ, ಶಿವಲಿಂಗಪ್ಪ ಭಂಡಕ್, ಅಶೋಕ ಗುರುಜೀ, ಅದಿನಾಥ ಹೀರಾ, ಭದ್ರಶೆಟ್ಟಿ ಚಂದ್ರಶೇಕರ್, ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

15 mins ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

3 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

8 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

8 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

10 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420