ಸುರಪುರ: ತಾಲೂಕಿನ ಬೇವಿನಾಳ ಗ್ರಾಮದಲ್ಲಿ ರಾಜಕೀಯ ವೈಷಮ್ಯದಿಂದ ಗಲಾಟೆ ನಡೆದು ವ್ಯಕ್ತಿಯೊಬ್ಬನನ್ನು ಕಾಯ್ದ ಎಣ್ಣೆಯಲ್ಲಿ ನೂಕಿದ್ದರಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಬೇವಿನಾಳ ಗ್ರಾಮದ ಮರೆಪ್ಪ ಪೊಲೀಸ್ ಗೌಡರ್ ಎಂಬ ೪೫ ವರ್ಷದ ವ್ಯಕ್ತಿ ತನ್ನ ಮನೆಯಿಂದ ಕುರಿ ದೊಡ್ಡಿಯ ಕಡೆಗೆ ಹೊರಟ ಸಂದರ್ಭದಲ್ಲಿ ದಾರಿಯಲ್ಲಿ ಬೇರೊಬ್ಬರ ಮನೆಯಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯುತ್ತಿತ್ತು,ಈ ಮನೆಯ ಬಳಿಯಲ್ಲಿ ಅಡುಗೆ ಮಾಡಿ ನಂತರ ಉಳಿದ ಕಾಯ್ದ ಎಣ್ಣೆಯು ಕಡಾಯಿಯಲ್ಲಿ ಇರಿಸಲಾಗಿತ್ತು.
ಈ ಮನೆಯ ಮುಂದೆ ಹೊರಟಿದ್ದ ಮರೆಪ್ಪ ಪೊಲೀಸ್ ಗೌಡರ್ಗೆ ಕೆಲ ಪ್ರಭಾವಿ ವ್ಯಕ್ತಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ನಮ್ಮ ವಿರುಧ್ಧವೆ ಚುನಾವಣೆಯಲ್ಲಿ ಕೆಲಸ ಮಾಡುತ್ತಿ ಎಂದು ಗದರಿಸಿ ನಂತರ ಮರೆಪ್ಪನನ್ನು ತಳ್ಳಿದಾಗ ಮರೆಪ್ಪ ಕಾಯ್ದ ಎಣ್ಣೆಯ ಕಡಾಯಿಯಲ್ಲಿ ಬಿದ್ದ ಪರಿಣಾಮ ಮರೆಪ್ಪನು ಗಂಭೀರವಾಗಿ ಗಾಯಗೊಂಡಿದ್ದು ಇಡೀ ದೇಹವೆಲ್ಲ ಸುಟ್ಟು ಹೋಗಿ ಚರ್ಮ ಕಿತ್ತಿದೆ.
ನಂತರ ಈತನ ಪತ್ನಿ ಬೇರೆಯವರ ಸಹಾಯದೊಂದಿಗೆ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಿದ್ದಾರೆ.ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…