ಉದ್ಯಮಿ ಪುತ್ರನ ಕೊಲೆ: ಆರೋಪಿಗಳು ಅಂದರ್

ಯಾದಗಿರಿ: ಹುಣಸಗಿ ಪಟ್ಟಣದ ಬಸ್  ನಿಲ್ದಾಣದ ಬಳಿಯಲ್ಲಿ ನಡೆದಿದ್ದ ಧನಲಕ್ಷ್ಮೀ ಜ್ಯೂವೆಲರ‍್ಸ್ ಮಾಲೀಕನ ಮಗನ ಹತ್ಯೆ ಪ್ರಕರಣವನ್ನು ಯಾದಗಿರಿ ಜಿಲ್ಲಾ ಪೊಲೀಸರು ಭೇದಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಜ್ಯೂವೆಲರ್ ಶಾಪ್ ಮಾಲೀಕ ಜಗದೀಶ ಶಿರವಿಯವರ ಪುತ್ರ ೨೨ ವರ್ಷದ ನರೇಂದ್ರನನ್ನು ಬುಧವಾರ ಮದ್ಹ್ಯಾನ ಹಾಡಹಗಲೆ ಬರ್ಬರವಾಗಿ ಕೊಲೆ ಮಾಡಲಾಗಿತ್ತು.ಅಲ್ಲದೆ ಇವರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಯುವಕ ಕಿಶೋರ ಎಂಬುವವನನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಹೇಳಲಾಗಿತ್ತು.ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಯಾದಗಿರಿ ಜಿಲ್ಲಾ ಪೊಲೀಸರು ಈಗ ಘಟನೆ ನಡೆದ ನಾಲ್ಕೇ ಗಂಟೆಗಳಲ್ಲಿ ಆರೋಪಿಗಳನ್ನು ಎಳೆದು ತರುವ ಮೂಲಕ ಎಲ್ಲರಿಂದ ಮೆಚ್ಚುಗೆಗಳಿಸಿದ್ದಾರೆ.

ಜಗದೀಶ ಶಿರವಿಯವರ ಬಳಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಕಿಶೋರ ಅಪಹರಣಕ್ಕೊಳಗಾಗಿದ್ದಾನೆ ಎಂದು ಏನು ಹೇಳಲಾಗಿತ್ತು,ಅವನೇ ಕೃತ್ಯವನ್ನು ಎಸಗಿ ಮನೆಯಲ್ಲಿದ್ದ ಬಂಗಾರ ಮತ್ತು ಬೆಳ್ಳಿ ಸಮೇತ ಪರಾರಿಯಾಗಿದ್ದ,ಅಲ್ಲದೆ ಮತ್ತೊಬ್ಬ ಮಹಾರಾಷ್ಟ್ರ ಮೂಲಕ ಅಜಿತ್ ಎಂಬುವವನ ಮೂಲಕ ಅಪಹರಣವಾಗಿದ್ದಾನೆ ಎಂದು ಸುಳ್ಳು ಸುದ್ದಿ ಹಬ್ಬಿಸುವಂತೆ ನೋಡಿಕೊಂಡಿದ್ದ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಎಸ್ಪಿ ರುಶಿಕೇಶ ಭಗವಾನ್ ಹಾಗು ಸುರಪುರ ಉಪವಿಭಾಗದ ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ ಮತ್ತು ಶಿವಾಂಶು ರಜಪೂತ್ ಐಪಿಎಸ್ ಕೆಂಭಾವಿ ಮತ್ತು ಯವರು ನಾಲ್ಕು ತಂಡಗಳನ್ನು ರಚನೆ ಮಾಡಿ ತನಿಖೆಗೆ ಮಾರ್ಗದರ್ಶನ ಮಾಡಿದ್ದರು.ಅದರಂತೆ ಸಂಜೆ ೭ ಗಂಟೆಯ ಸುಮಾರಿಗೆ ಹುಣಸಗಿ ಸಮೀಪದ ಗ್ರಾಮದ ಬಳಿಯಲ್ಲಿ ಅಡವಿಯಲ್ಲಿದ್ದವನನ್ನು ಪತ್ತೆ ಮಾಡಿ ಎಳೆದು ತಂದಿದ್ದು,ಜಗದೀಶ ಶಿರವಿ ಮನೆಯಲ್ಲಿದ್ದ ೧ ಕೆಜಿ ೫೭೦ ಗ್ರಾಂ ಬಂಗಾರ ಹಾಗು ೨ ಕೆಜಿ ಬೆಳ್ಳಿ ಒಂದು ಬೈಕ್ ಸೇರಿ ಒಟ್ಟು ೧ ಕೋಟಿ ರೂಪಾಯಿಗಳ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.ಅಲ್ಲದೆ ಇವನಿಗೆ ಸಹಕಾರ ನೀಡಿ ಅಪಹರಣವಾಗಿದ್ದಾನೆಂದು ಸುಳ್ಳು ಸುದ್ದಿ ಹಬ್ಬಿಸಿದ್ದ ಮಹಾರಾಷ್ಟ್ರ ಮೂಲದ ಅಜಿತ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.

ಇದರಿಂದಾಗಿ ಇಡೀ ಹುಣಸಗಿ ಜನರನ್ನೇ ಬೆಚ್ಚಿ ಬೀಳಿಸಿದ್ದ ನರೇಂದ್ರನ ಕೊಲೆಯನ್ನು ಭೇದಿಸುವ ಮೂಲಕ ಜನರಲ್ಲಿದ್ದ ಭಯವನ್ನು ದೂರ ಮಾಡಿದಂತಾಗಿದ್ದು ಬಂಧನಕ್ಕೊಳಪಡಿಸಿದ ಇಬ್ಬರು ಆರೋಪಿಗಳನ್ನು ಹಾಗು ಕದ್ದ ಎಲ್ಲಾ ಮಾಲನ್ನು ಪೊಲೀಸರು ಪ್ರದರ್ಶಿಸಿದರು.ಈ ಸಂದರ್ಭದಲ್ಲಿ ಎಸ್ಪಿ ರುಶಿಕೇಶ್ ಭಗವಾನ್ ಸೋನೆವಾಣೆ ಸುರಪುರ ಉಪ ವಿಭಾಗದ ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ ಶಿವಾಂಶು ರಜಪೂತ್ ಐಪಿಎಸ್ ಕೆಂಭಾವಿ ಹಾಗು ಸಿಪಿಐ ದೌಲತ್ ಎನ್.ಕೆ ಪಿಎಸೈ ಬಾಪುಗೌಡ ಪಾಟೀಲ್ ಸೇರಿದಂತೆ ತನಿಖಾ ತಂಡದಲ್ಲಿದ್ದ ಎಲ್ಲಾ ಪೊಲೀಸರು ಹಾಜರಿದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420