ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಸವರಾಜ ಜಮದ್ರಖಾನಿಯವರನ್ನು ರಂಗಂಪೇಟೆಯ ಅನೇಕ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಬಸವರಾಜ ಜಮದ್ರಖಾನಿಯವರ ಗೃಹದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸನ್ಮಾನವನ್ನು ನೆರವೇರಿಸಿ ಮಾತನಾಡಿದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೂಗುರೇಶ ವಾರದ ಮಾತನಾಡಿ,ಬಸವರಾಜ ಜಮದ್ರಖಾನಿಯವರು ಬದುಕಿನುದ್ದಕ್ಕೂ ಸಮಾಜ ಸೇವೆ ನಾಡು ನುಡಿಯ ಸೇವೆಯಲ್ಲಿ ಬದುಕಿದವರು,ಇವರ ಒಡನಾಡಿಗಳಂತಿದ್ದ ಮಾಜಿ ಸಚಿವರಾದ ರಾಜಾ ಮದನಗೋಪಾಲ ನಾಯಕ ಅವರ ನಿಧನದಿಂದ ತೆರವಾಗಿರುವ ಕನ್ನಡ ಸಾಹಿತ್ಯ ಸಂಘಕ್ಕೆ ಜಮದ್ರಖಾನಿ ಸರ್ವರು ನೇಮಕವಾಗಿದ್ದು ಸಂತೋಷದ ಸಂಗತಿಯಾಗಿದೆ ಎಂದರು.
ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ,ಬಸವರಾಜ ಜಮದ್ರಖಾನಿಯವರು ನನ್ನ ಬಗ್ಗೆ ಅಭಿಮಾನವನ್ನಿಟ್ಟು ಸನ್ಮಾನಿಸಿ ಗೌರವಿಸಿರುವುದು ಸಂತೋಷದ ಸಂಗತಿಯಾಗಿದೆ,ಮುಂದಿನ ದಿನಗಳಲ್ಲಿ ತಾವೆಲ್ಲರು ಈ ಸಂಘದೊಂದಿಗೆ ಇದ್ದು ಕನ್ನಡ ನಾಡು ನುಡಿಯ ಕೆಲಸದಲ್ಲಿ ಜೊತೆಯಾಗುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಿನೋದ ಆವಂಟಿ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಕುಂಬಾರ ಮಂಜುನಾಥ ಗುಳಗಿ ಅಶೋಕ ಸಜ್ಜನ್ ಬನದೇಶ ಎಕ್ಕೆಳ್ಳಿ ವೀರಭದ್ರಪ್ಪ ಕುಂಬಾರ ಶರಣು ಅರಕೇರಿ ನಾಗರಾಜ ರುಮಾಲ ಅಮರೇಶ ಕುಂಬಾರ ಮಂಜುನಾಥ ಮಠಪತಿ ಸೇರಿದಂತೆ ಅನೇಕರಿದ್ದರು.ಶಿಕ್ಷಕ ಶಿವಕುಮಾರ ಕಮತಗಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…