ಕೊಚ್ಚಿ ಸಹೋದರರಿಬ್ಬರ ಹತ್ಯೆ: ಕಲಬುರಗಿ ಜಿಲ್ಲೆಯಲ್ಲಿ ಘಟನೆ

0
0

ಕಲಬುರಗಿ: ಹಳೆ ವೈಷಮ್ಯದ ಹಿನ್ನೆಯಲ್ಲಿ ಇಬ್ಬರು ಸಹೋದರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ನಡೆಸಿ ಪರಾರಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ.

ತಡಕಲ್ ಗ್ರಾಮದ ನಿವಾಸಿಗಳಾದ ನಿಲೇಶ್ (39), ರಾಜಶೇಖರ (35) ಕೊಲೆಯಾದ ದುರ್ದೈವಿಗಳು. ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದ್ದು, ಹಳೆ ವೈಷಮ್ಯದ ಹಿನ್ನೆಲೆ ಕೊಲೆ ನಡೆದಿದೆ ಎಂದು ಅನುಮಾನ ವ್ಯಕ್ತವಾಗುತ್ತಿದೆ.

Contact Your\'s Advertisement; 9902492681

ಸದ್ಯ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here