ಕಲಬುರಗಿ: ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸೂಕ್ತ ಬಸ್ ಸೇವೆ ಒದಗಿಸಬೇಕೆಂದು ಆಗ್ರಹಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.
ಕೋವಿಡ್ ಕಾರಣದಿಂದ ರದ್ದು ಪಡಿಸಿದ್ದ ಹಾಗರಗುಂಡಗಿ- ಸೂಪರ್ ಮಾರ್ಕೇಟ್ ಬಸ್ ಸೇವೆ ಮೊದಲಿನ ರೀತಿ ಮತ್ತೆ ಪ್ರಾರಂಭಿಸಬೇಕೆಂದು ಗ್ರಾಮದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಒತ್ತಾಯಿಸಿದರು. ಈ ಬಸ್ ಆರಂಭದಿಂದ ಶಾಲಾ ಕಾಲೇಜುಗಳಿಗೆ ಹೋಗಿ ಬರಲು ವಿದ್ಯಾರ್ಥಿಗಳಿಗೆ ಅನೂಕೂಲವಾಗಲಿದೆ ಅಲ್ಲದೇ ವ್ಯಾಪಾರ ವಹಿವಾಟು ನಡೆಸುವವರಿಗೂ ಸಮಯಕ್ಕೆ ಸರಿಯಾಗಿ ಸೇವೆ ದೊರಕಿದಂತಾಗುತ್ತದೆ ಎಂದು ಮನವರಿಕೆ ಮಾಡಿದರು.
ಗ್ರಾಮದ ಮುಖಂಡರಾದ ಶಿವಶರಣಪ್ಪ ಕುರ್ನಳ್ಳಿ, ಸೋಮಶೇಖರ ಸಜ್ಜನ, ಶಾಂತಪ್ಪ ರೇವಣ, ಶರಣು ಹನ್ನೂರ, ಅನೀಲಕುಮಾರ ಹರಳಯ್ಯ, ಲಕ್ಷ್ಮೀಕಾಂತ ಜಮಾದಾರ, ವಿದ್ಯಾರ್ಥಿಗಳಾದ ಶಿವಲಿಂಗಯ್ಯ ಮಠಪತಿ, ಮಾಳಪ್ಪ ಕಂಠಿಕಾರ, ಸಾಗರ ಕೂಸಾ, ಬಾಬು ವಜಾಪೂರ, ಗುರುದೇವಿ ರಾವೂರ, ತನುಜಾ ಮಿಣಜಗಿ, ಲಕ್ಷ್ಮೀ ಮಠಪತಿ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹೇರೂರ ಮತ್ತು ಮೈನಾಳ ಬಸ್ ತಡೆ ಹಿಡಿದಿದ್ದರಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು ಇದರಿಂದ ಪ್ರಯಾಣಿಕರಿಗೆ ಅನಾನೂಕೂಲವಾಯಿತು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…