ಬಿಸಿ ಬಿಸಿ ಸುದ್ದಿ

ಮಂಗಳೂರು ಗ್ರಾಮದಲ್ಲಿ ಮಹಾನಾಯಕ ಬ್ಯಾನರ್ ಅನಾವರಣ

ಸುರಪುರ: ತಾಲೂಕಿನ ಮಂಗಳೂರು ಗ್ರಾಮದಲ್ಲಿ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಮಹಾನಾಯಕ ಧಾರವಾಹಿ ಬೆಂಬಲಿಸಿ ಬ್ಯಾನರ್ ಅನಾವರಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಅನಾವರಣಗೊಳಿಸಿದ ಮುಖಂಡ ವೆಂಕೋಬ ಯಾದವ್ ಅವರು ಮಾತನಾಡಿ, ಡಾ:ಬಿ.ಆರ್.ಅಂಬೇಡ್ಕರ್ ಅವರು ಕೇವಲ ಒಂದು ಜಾತಿ ಮತಕ್ಕೆ ಸೀಮಿತವಾದವರಲ್ಲ,ಅವರು ದೇಶದ ಪ್ರತಿಯೊಬ್ಬರ ಏಳಿಗೆ ಹಾಗು ದೇಶದ ಸಮಗ್ರತೆಗಾಗಿ ಸಂವೀಧಾನವನ್ನು ರಚಿಸಿ ಕೊಟ್ಟಿದ್ದಾರೆ.ಅಲ್ಲದೆ ದೇಶದಲ್ಲಿ ಹಿಂದುಳಿದ ಹಾಗು ತುಳಿತಕ್ಕೊಳಗಾದ ಎಲ್ಲರು ದಲಿತರೆ ಆಗಿದ್ದಾರೆ,ಅವರೆಲ್ಲರ ಏಳಿಗೆಗಾಗಿ ಸಂವೀಧಾನವನ್ನು ರಚಿಸಿದ್ದಾರೆ.ಅಂತಹ ಮಹಾನ್ ವ್ಯಕ್ತಿಯ ಧಾರವಾಹಿ ಬೆಂಬಲಿಸಿ ಬ್ಯಾನರ್ ಅನಾವರಣಗೊಳಿಸುವ ಅವಕಾಶ ನನಗೆ ಲಭಿಸಿದ್ದು ನನ್ನ ಭಾಗ್ಯವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿದ್ದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಮಾತನಾಡಿ,ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಎಲ್ಲರ ಮಾದರಿ ವ್ಯಕ್ತಿಯಾಗಿದ್ದಾರೆ,ಎಲ್ಲ ಪೋಷಕರು ಈ ಧಾರವಾಹಿಯನ್ನು ನೋಡುವ ಮೂಲಕ ಮಕ್ಕಳಲ್ಲಿಯೂ ಅಂಬೇಡ್ಕರರಂತೆ ಬುದ್ಧಿ ಮತ್ತು ಜನಪರವಾದ ಕಾಳಜಿಯನ್ನು ಬೆಳೆಸುವಂತೆ ಆಶಿಸಿದರು.

ಅಂಬೇಡ್ಕರರು ದೇಶದಲ್ಲಿನ ಎಲ್ಲಾ ದೀನ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರರಿಗೆ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಮತ್ತು ರಾಜಕೀಯ ಸೌಲಭ್ಯವನ್ನು ನೀಡುವ ಮೂಲಕ ದೇಶದ ಅಭೀವೃಧ್ಧಿಗೆ ದಾರಿ ದೀಪವಾಗಿದ್ದಾರೆ.ಅಂತಹ ಮಹಾನಾಯಕನ ಬ್ಯಾನರ್ ಅನಾವರಣಗೊಳಿಸುವ ಮೂಲಕ ಅಂಬೇಡ್ಕರರ ಸ್ಮರಣೆಗೆ ಮುಂದಾಗಿರುವುದು ಸಂತೋಷದ ಸಂಗತಿಯಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡ ಬಾಲಯ್ಯ ಶರಣ ಹಾಗು ಹೋರಾಟಗಾರ ಎಂ.ಪಟೇಲ್ ಮಾತನಾಡಿದರು.ಕಾರ್ಯಕ್ರಮದ ಆರಂಭದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಕ್ಯಾಂಡಲ್ ಬೆಳಗಿಸಿ ನಮಿಸಲಾಯಿತು. ಕಾರ್ಯಕ್ರಮದಲ್ಲಿ ಮುಖಂಡ ಶೇಖಪ್ಪ ಬಡಿಗೇರ,ವೀರಭದ್ರಪ್ಪ ತಳವಾರಗೇರಾ ಅರ್ಷದ್ ದಖನಿ ಭೀಮರಾಯ ಮಾಸ್ಟರ್ ಭೀಮು ಯಾದವ್ ಸೇರಿದಂತೆ ಅನೇಕರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago