ಒಂದೆ ದಿನ 393 ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಿಕೆ: ಶೇ.50.51 ರಷ್ಟು ಸಾಧನೆ

ಕಲಬುರಗಿ: ಜಿಲ್ಲೆಯಲ್ಲಿ ಮೊದಲ ಹಂತದ ಕೊರೋನಾ ಲಸಿಕೆಯನ್ನು ಒಟ್ಟು 8 ಕೇಂದ್ರಗಳಲ್ಲಿ 393 ಆರೋಗ್ಯ ಸಿಬ್ಬಂದಿಗೆ ಹಾಕಿದ್ದು, ಲಸಿಕೆಯಿಂದ ನಾಲ್ವರಿಗೆ ಅಲ್ಪ ಪ್ರಮಾಣದಲ್ಲಿ ಅಡ್ಡಪರಿಣಾಮ ಬೀರಿದ್ದು ಬಿಟ್ಟರೆ, ಉಳಿದಂತೆ ಲಸಿಕೆ ನೀಡುವ ಕಾರ್ಯ ಯಶಸ್ವಿಯಾಗಿ ನಡೆದಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಟ್ಟು ಜಿಲ್ಲೆಯಲ್ಲಿ 778 ಫಲಾನುಭವಿಗಳ ಪೈಕಿ 393 ಫಲಾನುಭವಿಗಳಿಗೆ ಲಸಿಕೆ ಹಾಕುವ ಮೂಲಕ ಶೇ.50.51ರಷ್ಟು ಗುರಿ ಸಾಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣದಲ್ಲಿರುವ ವಾರ್ ರೂಂ (ಕಂಟ್ರೋಲ್ ರೂಂ)ಗೆ ಭೇಟಿ ನೀಡಿದ ಅವರು ಅಂಕಿ-ಅಂಶಗಳನ್ನು ಪರಿಶೀಲಿಸಿ ಮಾಹಿತಿ ನೀಡಿದ್ದಾರೆ.

ತಾಲೂಕುವಾರು ಲಸಿಕೆ ವಿವರ: ಗುಲಬರ್ಗಾ ವೈದ್ಯಕೀಯ ಮಹಾವಿದ್ಯಾಲಯ ಕೇಂದ್ರ-47, ಅಫಜಲಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ-50, ಆಳಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ-42, ಸೇಡಂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ-57, ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ-30, ಜೇವರ್ಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ-80, ಚಿಂಚೋಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ-50, ಗೊಬ್ಬೂರು(ಬಿ) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಿಹೆಚ್‍ಸಿ-37 ಆರೋಗ್ಯ ಸಿಬ್ಬಂದಿಗೆ ಕೋವಿಡ್ ಲಸಿಕೆ ಹಾಕಲಾಗಿದೆ ಎಂದು ಅಂಕಿ-ಅಂಶ ಸಹಿತ ಮಾಹಿತಿ ನೀಡಿದ್ದಾರೆ.

ನೋಂದಾಯಿತ ಆರೋಗ್ಯ ಸಿಬ್ಬಂದಿ ಪೈಕಿ ಕೆಲವರು ಕೇಂದ್ರ ಸ್ಥಾನದಲ್ಲಿ ಇಲ್ಲದಿರುವುದು, ಅನಾರೋಗ್ಯ ಹಿನ್ನೆಲೆ, ಕರ್ತವ್ಯದ ಹಿನ್ನೆಲೆಯಲ್ಲಿ ಬೇರೆ ಆಸ್ಪತ್ರೆಗಳಿಗೆ ನಿಯೋಜನೆ ಮುಂತಾದ ಕಾರಣಗಳಿಂದÀ ಲಸಿಕೆ ಪಡೆದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಲಸಿಕೆ ಪಡೆದ ಫಲಾನುಭವಿಗಳನ್ನು ಆಯಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾದ ತಜ್ಞ ವೈದ್ಯರ ವೀಕ್ಷಣಾ ಕೊಠಡಿಯಲ್ಲಿ ಒಳಗೊಂಡಂತೆ 30 ನಿಮಿಷಗಳ ಕಾಲ ಇರಿಸಿ ಅಡ್ಡಪರಿಣಾಮ ಕುರಿತು ನಿಗಾವಹಿಸಲಾಯಿತು. ಚಿಂಚೋಳಿ ಕೇಂದ್ರಲ್ಲಿ ಮೂವರಿಗೆ ಮತ್ತು ಆಳಂದ ಆರೋಗ್ಯ ಕೇಂದ್ರದಲ್ಲಿ ಓರ್ವರಿಗೆ ಅಲ್ಪಪ್ರಮಾಣದ ಲಕ್ಷಣಗಳು ಕೆಲಹೊತ್ತು ಕಾಣಸಿಕೊಂಡಿತ್ತು. ನಂತರ ಲಸಿಕೆ ಪಡೆದ ಫಲಾನುಭವಿಗಳು ಚೇತರಿಸಿಕೊಂಡರು ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ವಿವರಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ, ವಾರ್‍ರೂಂನ(ಕಂಟ್ರೋಲ್ ರೂಂ) ನಿರ್ವಹಣೆಯ ಉಸ್ತುವಾರಿ ಹೊತ್ತಿದ್ದ ಕಲಬುರಗಿ ಸಹಾಯಕ ಆಯುಕ್ತ ಬಲರಾಮ ಲಮಾಣಿ, ಐ.ಎ.ಎಸ್. ಪ್ರೊಬೇಷನರಿ ಅಧಿಕಾರಿ ಡಾ.ಆಕಾಶ್ ಶಂಕರ್, ಡಬ್ಲ್ಯೂಹೆಚ್‍ಓ ಪ್ರತಿನಿಧಿ ಡಾ.ಅನಿಲ್ ತಾಳಿಕೋಟೆ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಪ್ರಭುಲಿಂಗ ಮಾನಕರ, ಕಂಟ್ರೋಲ್ ರೂಂನ ವಿಶೇಷಾಧಿಕಾರಿ ಡಾ.ಎಂ.ಕೆ.ಪಾಟಿಲ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420