ಬಿಸಿ ಬಿಸಿ ಸುದ್ದಿ

ಮೋದಿ ಬರೆದ ಮರಣ ಶಾಸನ ಸುಡುತ್ತೇವೆ: ದಿವಾಕರ

ಕಲಬುರಗಿ: ತಾನು ರೈತಪರ ಎಂದು ಹೇಳುತ್ತಲೇ ಪ್ರಧಾನಿ ನರೇಂದ್ರ ಮೋದಿ ರೈತರ ಮರಣ ಶಾಸನ ಬರೆದಿದ್ದಾರೆ. ರೈತರು ಆರ್‌ಕೆಎಸ್ ನೇತೃತ್ವದಲ್ಲಿ ಆ ಶಾಸನಗಳನ್ನು ಬೆಂಕಿಗೆ ಎಸೆದು ಸುಡುತ್ತಿದ್ದಾರೆ ಎಂದು ರೈತ ಕೃಷಿ ಕರ್ಮಿಕ ಸಂಘಟನೆ ರಾಜ್ಯ ಕಾರ್ಯದರ್ಶಿ ಎಚ್.ವಿ.ದಿವಾಕರ್ ಹೇಳಿದರು.

ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಜನವಿರೋಧಿ ಕರಾಳ ಕೃಷಿ ಶಾಸನಗಳ ವಿರುದ್ಧ ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್‌ಕೆಎಸ್) ವತಿಯಿಂದ ವಾಡಿ ನಗರದಲ್ಲಿ ಉದ್ಘಾಟನೆಗೊಂಡ ರೈತರ ಆಗ್ರಹ ಜೀಪ್ ಜಾಥಾ ಉದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ದುರಾಡಳಿತದಿಂದಾಗಿ ದೇಶದ ಅನ್ನದಾತರ ಬದುಕು ಸರ್ವನಾಶವಾಗಿದೆ. ಈಗ ಬಿಜೆಪಿ ತರುತ್ತಿರುವ ಹೊಸ ಮಸೂದೆಗಳು ರೈತರು ಬದುಕುವ ಹಕ್ಕನೇ ಕಸಿದುಕೊಂಡು ನಿರ್ಗತಿಕರನ್ನಾಗಿಸಲು ಹೊರಟಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಬಂಡವಾಳಿಗರ ಲಾಭದ ಕಾರ್ಖಾನೆಯನ್ನಾಗಿ ಪರಿವರ್ತಿಸಲು ಸರಕಾರ ಟೊಂಕಕಟ್ಟಿ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಕ್ಷಾಂತರ ರೈತರು ಕೃಷಿ ನೀತಿಗಳನ್ನು ವಿರೋಧಿಸಿ ದೇಶದಾದ್ಯಂತ ಹೋರಾಟ ಬೆಳೆಸುತ್ತಿದ್ದಾರೆ. ದೇಹಲಿಗೆ ಮುತ್ತಿಗೆ ಹಾಕಲು ತೆರಳಿದ ಅಸಂಖ್ಯಾತ ರೈತರನ್ನು ಘಾಜಿಯಾಬಾದ್ ಗಡಿಯಲ್ಲೇ ಸರಕಾರ ತಡೆದಿದೆ. ಹೆದ್ದಾರಿಗಳನ್ನು ಧ್ವಂಸ ಮಾಡಿ ರೈತರು ದೆಹಲಿ ಪ್ರವೇಶಿಸದಂತೆ ನೋಡಿಕೊಳ್ಳಲಾಗಿದೆ.

ಪೊಲೀಸ್ ಬಲ ಪ್ರಯೋಗಿಸುವ ಮೂಲಕ ಸರಕಾರ ರೈತರ ಮೇಲೆ ಜಲಫಿರಂಗಿ ಮತ್ತು ಅಶ್ರುವಾಯು ಸಿಡಿಸಿ ಹೋರಾಟ ಮುರಿಯಲು ಪ್ರಯತ್ನಿಸಿದೆ. ಥರಗುಟ್ಟುವ ಚಳಿಯಲ್ಲಿ ದೇಶದ ನಾನಾ ರಾಜ್ಯಗಳ ಲಕ್ಷಾಂತರ ರೈತರು ಹೋರಾಟ ಮುಂದುವರೆಸಿದ್ದಾರೆ. ೪೦ ಕ್ಕೂ ಹೆಚ್ಚು ರೈತರು ಈ ಹೋರಾಟದಲ್ಲಿ ಹುತಾತ್ಮರಾಗಿದ್ದಾರೆ. ಎಲ್ಲಾ ಸರಕಾರಗಳು ಕೇವಲ ಕಾರ್ಪೋರೇಟ್ ಬಂಡವಳಗಾರರ ಪರವಾಗಿವೆ ಎಂಬ ಕಟುಸತ್ಯ ಬಹಿರಂಗಗೊಂಡಿದೆ. ಯಾವ ಪಕ್ಷಗಳೂ ಜನಪರವಾಗಿಲ್ಲ ಎಂಬುದು ಮನವರಿಕೆಯಾಗಿದೆ. ರಾಜಿರಹಿತ ಹೋರಾಟದ ಮೂಲಕ ಈ ಜನವಿರೋಧಿ ನೀತಿಗಳನ್ನು ಸೋಲಿಸಬೇಕಿದೆ ಎಂದರು.

ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ನಗರ ಸಮಿತಿ ಕಾರ್ಯದರ್ಶಿ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ ಅವರು ಕೆಂಪು ಭಾವುಟ ಪ್ರದರ್ಶಿಸುವ ಮೂಲಕ ರೈತ ಜಾಗೃತಿ ಜೀಪ್ ಜಾಥಾ ಉದ್ಘಾಟಿಸಿದರು. ಆರ್‌ಕೆಎಸ್ ತಾಲೂಕು ಉಪಾಧ್ಯಕ್ಷ ಗುಂಡಣ್ಣ ಎಂ.ಕೆ, ಎಐಡಿವೈಒ ಅಧ್ಯಕ್ಷ ಶರಣು ವಿ.ಕೆ, ಎಐಡಿಎಸ್‌ಒ ಕಾರ್ಯದರ್ಶಿ ವೆಂಕಟೇಶ ದೇವದುರ್ಗಾ, ಎಐಯುಟಿಯುಸಿ ಜಿಲ್ಲಾ ಮುಖಂಡ ಶರಣು ಹೇರೂರ, ಭಾಗಣ್ಣ ಬುಕ್ಕಾ, ಮಲ್ಲಣ್ಣ ದಂಡಬಾ, ಮಲ್ಲಿನಾಥ ಹುಂಡೇಕಲ್, ಶಿವುಕುಮಾರ ಆಂದೋಲಾ, ರಾಜು ಒಡೆಯರ, ವಿಠ್ಠಲ ರಾಠೋಡ, ಗೋವಿಂದ ಯಳವಾರ, ದತ್ತಾತ್ರೇಯ ಹುಡೇಕರ್ ಜಥಾದಲ್ಲಿ ಪಾಲ್ಗೊಂಡಿದ್ದರು. ವಾಡಿ, ನಾಲವಾರ, ಇಂಗಳಗಿ, ಕುಂದನೂರ, ಚಾಮನೂರ, ಕೊಲ್ಲೂರ, ಕುಲಕುಂದಾ, ಲಾಡ್ಲಾಪುರ, ಹಳಕರ್ಟಿ, ಅಳ್ಳೊಳ್ಳಿ, ಅಣ್ಣಿಕೇರಾ ಗ್ರಾಮಗಳಲ್ಲಿ ರೈತರ ಸಭೆಗಳನ್ನು ನಡೆಸುವ ಮೂಲಕ ಕೃಷಿ ನೀತಿಗಳ ವಿರುದ್ಧ ಜಾಗೃತಿ ಮೂಡಿಸಲಾಯಿತು. ಇದೇ ವೇಳೆ ಆರ್‌ಕೆಎಸ್ ಕಾರ್ಯಕರ್ತರು ಹಳ್ಳಿ ರೈತರಿಂದ ಹೋರಾಟಕ್ಕಾಗಿ ದೇಣಿಗೆ ಸಂಗ್ರಹಿಸಿದರು. ರೈತರು ಧನ ಸಹಾಯ ನೀಡಿ ಹೋರಾಟವನ್ನು ಬೆಂಬಲಿಸಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago