ಆಳಂದ: ತಾಲೂಕಿನಲ್ಲಿ ಕೋವಿಡ್-೧೯ ನಂತರ ಜ.೧ರಂದು ಆರಂಭಗೊಂಡ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅವ್ಯವಸ್ಥೆಯಿಂದ ಕೂಡಿದರು ಸಹಿತ ಸಂಬಂಧಿತ ಶಿಕ್ಷಣಾಧಿಕಾರಿಗಳು ಯಾವುದೇ ಸುಧಾರಣೆ ಕೈಗೊಳ್ಳಲಾದೆ ವಿಫಲವಾಗಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಬಸವರಾಜ ಎಸ್. ಕೊರಳ್ಳಿ ಅವರು ಇಂದಿಲ್ಲಿ ಆರೋಪಿಸಿದರು.
ಪಟ್ಟಣದಲ್ಲಿ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನ್ನುವುದನ್ನು ಮರೆತು ರಾಜಕೀಯ ನಾಯಕರಂತೆ ಸುಮಾರು ೮ರಿಂದ೧೦ ಜನ ಶಿಕ್ಷಕರನ್ನು ಜೊತೆಗೆ ತೆಗೆದುಕೊಂಡು ದಿನಕ್ಕೊಂದು ಕಾರ್ಯಕ್ರಮ ಮಾಡುತ್ತಿದ್ದಾರೆ. ಆದರೆ, ಆ ಶಿಕ್ಷಕರ ಹಾಜರಿ ಹೇಗೆ ಮತ್ತು ಆ ಶಾಲೆಯ ಮಕ್ಕಳ ಪಾಠ ಬೋಧನೆ ಹೇಗೆ ಅನ್ನುವಂಥ ಪ್ರಶ್ನೆ ಅನೇಕ ಶಿಕ್ಷಣ ಪ್ರೇಮಿಗಳ ಹಾಗೂ ನಿಷ್ಠಾವಂತ ಶಿಕ್ಷಕರ ಪ್ರಶ್ನಿಸುತ್ತಿದ್ದಾರೆ.
ಇದಕ್ಕೆ ಶಿಕ್ಷಣಾಧಿಕಾರಿಗಳು ಉತ್ತರಿಸಬೇಕು ಎಂದು ಅವರು ಆಗ್ರಹಿಸಿದರು. ಶಿಕ್ಷಣಾಧಿಕಾರಿಗಳ ನಿರ್ಲಕ್ಷ್ಯದಿಂದ ಇತ್ತ ಶಾಲೆಗಳ ಮಧ್ಯಾಹ್ನ ೪:೦೦ಗಂಟೆಯ ಬದಲು ೨:೦೦ಗಂಟೆಗೆ ಬೀಗ ಬೀಳುತ್ತಿವೆ. ಇದುವೇ ನಮ್ಮ ಆಳಂದ ತಾಲೂಕಿನ ಶಿಕ್ಷಣ ಇಲಾಖೆಯ ವ್ಯವಸ್ಥೆಯಾಗಿದೆ. ತಾಲೂಕಿನ ಕೊಡಲಹಂಗರಗಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದು ರಾಜ್ಯ ಹೆದ್ದಾರಿಯ ಮುಖ್ಯರಸ್ತೆಯಲ್ಲಿ ಇದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿಯಿಂದ ಸುಮಾರು ೬ ಕಿ.ಮೀ, ಅಂತರದಲ್ಲಿರುವ ಶಾಲೆ ಈ ಶಾಲೆ ಹತ್ತರಿದಿಂದ ಕ್ಷೇತ್ರಶಿಕ್ಷಣಾಧಿಕಾರಿಗಳು ನಿತ್ಯ ಕಲಬುರಗಿ ಮನೆಗೆ ಹೋಗಿ ಬರುವಾಗ ಎರಡು ಬಾರಿ ಇದರ ಹತ್ತಿರದಿಂದಲೇ ಸಾಗುತ್ತಾರೆ.
ಇದರ ಬಾಗಿಲು ಮಧ್ಯಾಹ್ನ ೨:೦೦ಗಂಟೆಗೆ ಮುಚ್ಚಿಕೊಂಡರೆ ಹೇಗೆ ಇಂಥ ಅನೇಕ ಶಾಲೆಗಳಲ್ಲಿ ಶಿಕ್ಷಕರು ಸರಿಯಾಗಿ ಶಾಲೆಗಳಿಗೆ ಹಾಜರಾಗುತ್ತಿಲ್ಲ. ಆದರು ಸಮಯ ಪೂರ್ಣ ಕೆಲಸ ನಿರ್ವಹಿಸಿ ಮಕ್ಕಳಿಗೆ ಪಾಠಬೋಧನೆ ಕೈಗೊಳ್ಳುತ್ತಿಲ್ಲ. ಇದಕ್ಕೆ ಸಂಬಂಧಿತ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರ ಗಮನಕ್ಕೂ ಮನವಿ ಸಲ್ಲಿಸಲಾಗಿದೆ. ಆದರೆ ಯಾವುದೇ ಬದಲಾವಣೆ ಆಗಿಲ್ಲ. ಶಾಲೆಗಳ ಅವ್ಯವಸ್ಥೆ ಪರಿಸ್ಥಿತಿ ಹೀಗೆ ಮುಂದುವರೆದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…