ಸುರಪುರ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಬಸವರಾಜ ಜಮದ್ರಖಾನಿಗೆ ಪ್ರತಿಷ್ಠಾನದ ಸನ್ಮಾನ

0
17

ಸುರಪುರ: ಇಲ್ಲಿಯ ಸುರಪುರ ಕನ್ನಡ ಸಾಹಿತ್ಯ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಸವರಾಜ ಜಮದ್ರಖಾನಿ ಅವರನ್ನು ಸಗರನಾಡು ಸೇವಾ ಪ್ರತಿಷ್ಠಾನವತಿಯಿಂದ ಸುರಪುರದ ಅವರ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ಸುರಪುರ ಕನ್ನಡ ಸಾಹಿತ್ಯ ಸಂಘಕ್ಕೆ ಸೂಕ್ತವಾದ ವ್ಯಕ್ತಿಯನ್ನು ಆಯ್ಕೆಮಾಡಿ ತಮಗೆ ಜವಬ್ದಾರಿವಹಿಸಿದ್ದು ನಮಗೆ ಸಂತಸವಾಗಿದೆ, ಪ್ರತಿವರ್ಷ ನಾಡಹಬ್ಬ ದಸರಾ ಮಹೋತ್ಸವ ಅನೇಕ ಸಾಹಿತಿಕ ಕಾರ್ಯಕ್ರಮಗಳು ಹಾಗೂ ಅನೇಕ ಪುಸ್ತಕಗಳ ಪ್ರಕಟಣೆ ಈ ಹಿಂದೆ ಸುರಪುರದ ಕನ್ನಡ ಸಾಹಿತ್ಯ ಸಂಘ ಅಧ್ಯಕ್ಷರಾಗಿದ್ದ ರಾಜಾ ಮದನಗೋಪಾಲ ನಾಯಕರ ನೇತೃತ್ವದಲ್ಲಿ ನಡೆಸಿಕೊಂಡು ಬಂದಿದೆ, ತಾವು ಕೂಡ ಸಂಘದ ಆರಂಭದಿಂದ ಕಾರ್ಯದರ್ಶಿಗಳಾಗಿ ಕನ್ನಡ ಸೇವೆ ಮಾಡುತ್ತಾ ಬಂದಿದ್ದು ಇಗಾಗಲೇ ಈ ಹಿಂದೆ ಸುರಪುರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ತಾವು ಅನುಪಮವಾದ ಸೇವೆ ಸಲ್ಲಿಸಿದ್ದಿರಿ ಪ್ರಸ್ತುತ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾಗಿ ನೇಮಕಗೊಂಡಿರುವುದು ನಮಗೆ ಹೆಚ್ಚಿನ ಸಂತಸತಂದಿದೆ ಎಂದು ಹೇಳಿದರು.

Contact Your\'s Advertisement; 9902492681

ಸನ್ಮಾನ ಸ್ವಿಕರಿಸಿ ಮಾತನಾಡಿದ ಬಸವರಾಜ ಜಮದ್ರಖಾನಿರವರು ನಿಮ್ಮೆಲ್ಲರ ಸಹಕಾರದಿಂದ ಸಾಹಿತಿಕ ಸೇವೆ ಮಾಡೊಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ವೇದಿಕೆಯ ವಿಭಾಗಿಯ ಅಧ್ಯಕ್ಷ ಶಿವರಾಜ ಕಲಿಕೇರಿ, ಪ್ರಮುಖರಾದ ರಾಮು ಸೂಗುರು, ಮುದಕಪ್ಪ ಚಂದ್ಲಾಪುರ, ಬಾಪುಗೌಡ ಹೆಗ್ಗಣದೊಡ್ಡಿ, ಪರಶುರಾಮ ಕಟ್ಟಿಮನಿ ಸೇರಿದಂತೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here