ಮಾಟ ಮಂತ್ರದ ಅನುಮಾನ: ಮಹಿಳೆಗೆ ಬೆಂಕಿ ಹಚ್ಚಿ ಹತ್ಯೆ: ಬಂಧನ

ಕಲಬುರಗಿ: 2019ನೇ ಸಾಲಿನ ಮೇ ತಿಂಗಳ ಮದ್ಯ ರಾತ್ರಿ ಆಳಂದ ತಾಲೂಕಿನ ಮುನ್ನಳ್ಳಿ ಗ್ರಾಮದಲ್ಲಿ ಕಾಶಿಬಾಯಿ ಬೀರಣ್ಣ ಖಟಗೇ (50) ಎಂಬ ಮಹಿಳೆ ಮಲಗಿಕೊಂಡಾಗ ಅದೇ ಗ್ರಾಮದ ಮಹಿಳೆ ಒಬ್ಬಳು ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚೆ ಕೊಲೆ ಮಾಡಿ ಪರಾರಿಯಾಗಿದ್ದ ಘಟನೆೆಯ ಆರೋಪಿಯನ್ನು  ಎರಡು ವರ್ಷಗಳ ನಂತರ ನರೋಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಸಿಮಿ ಮೇರಿಯಮ್ ಜಾರ್ಜ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಪ್ರಸನ್ನ ದೇಸಾಯಿ ರವರ ಮಾರ್ಗದರ್ಶನದಲ್ಲಿ ಮತ್ತು ಪೊಲೀಸ್ ಉಪಾಧೀಕ್ಷಕರಾದ ಮಲ್ಲಿಕಾರ್ಜುನ ಸಾಲಿ ಇವರ ನೇತೃತ್ವದಲ್ಲಿ ಮಂಜುನಾಥ ಎಸ್.ಸಿಪಿ.ಐ ಆಳಂದ ಮತ್ತು ಉದಂಡಪ್ಪ ಮಣೂರಕರ್ ಪಿ.ಎಸ್.ಐ ಹಾಗೂ ಸಿಬ್ಬಂದಿಯವರಾದ ಶರಣಗೌಡ, ಮಲ್ಲಿಕಾರ್ಜುನ, ರಾಮಲಿಂಗ, ಬಸವರಾಜ, ಸತೀಷ, ಸುರೇಖಾ ಅವರ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಇಂದು ಕೊಲೆ ಮಾಡಿದ ಮುನ್ನಳ್ಳಿ ಗ್ರಾಮದ ಗಿರಿಜಾಬಾಯಿ ಅಮೃತ ಖಟಗೆಗೋಳ್ (60) ಇವಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡರಸಿದ್ದಾರೆ.

ವಿಚಾರಣೆಯಲ್ಲಿ ಮೃತ ಕಾಶಿಬಾಯಿ ಗಿರಿಜಾಬಾಯಿ ಕುಟುಂಬದ ಮೇಲೆ ಮಾಟ ಮಂತ್ರ ಮಾಡಿದ್ದು, ಇದ್ದರಿಂದ ಆಪಾದಿತಳ ಕುಟುಂಬ ಸದ್ಯಸರ ಆನಾರೋಗ್ಯದಿಂದ ಬಳಗಿ, ಮಗ ಚಿದಾನಂದ, ಮಗಳು ಪ್ರೀತಿ ಮೊಮ್ಮಗಳು ಹಾಗೂ 2 ದನಕರುಗಳು ಮೃತಪಟ್ಟಿದ್ದು,  ಇದಕ್ಕೆಲ್ಲ ಕಾಶಿಬಾಯಿನೇ ಕಾರಣ ಎಂದು ಭಾವಿಸಿ, ಆಕೆಯ ಮೇಲೆ ದ್ವೇಷ ಸಾಧಿಸಿ, ರಾತ್ರಿಯ ವೇಳೆ ಮಲಗಿ ಕೊಂಡಾಗ ಅವಳ ಮೈ ಮೇಲೆ ಸೀಮೆ ಎಣ್ಣೆ ಹಾಕಿ ಬೆಂಕಿ ಹಚ್ಚೆ ಕೊಲೆ ಮಾಡಿರುತ್ತಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420