ಜಿಲ್ಲೆಯಲ್ಲಿ 2ನೇ ದಿನ 1306 ಜನ ಅರೋಗ್ಯ ಸಿಬ್ಬಂದಿಗೆ ಕೋವಿಡ್ ಲಸಿಕೆ ನಿಡಿಕೆ

ಕಲಬುರಗಿ: ಜಿಲ್ಲೆಯಲ್ಲಿ ಎರಡನೇ ದಿನದ (ಸೋಮವಾರ) ಕೊರೋನಾ ಲಸಿಕೆಯನ್ನು ಒಟ್ಟು 35 ಕೇಂದ್ರಗಳಲ್ಲಿ 1306 ಜನ ಆರೋಗ್ಯ ಸಿಬ್ಬಂದಿಗೆ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ತಿಳಿಸಿದರು.

ಒಟ್ಟು 2518 ಫಲಾನುಭವಿಗಳ ಪೈಕಿ 1306 ಜನರಿಗೆ ಲಸಿಕೆ ನೀಡಲಾಗಿದ್ದು, ಈ ಮೂಲಕ ಶೇ.50.90 ರಷ್ಟು ಲಸಿಕೆ ಹಾಕಲಾಗಿದೆ. ನೋಂದಣಿ ಮಾಡಿಕೊಂಡಿರುವ ಕೆಲವು ಸಿಬ್ಬಂದಿಗಳು ಬೇರೆ ಕಡೆ ಕರ್ತವ್ಯಕ್ಕೆ ಹಾಜರಾದ ಹಿನ್ನೆಲೆ ಹಾಗೂ ಮತ್ತಿತರ ಕಾರಣಗಳಿಂದ 1260 ಆರೋಗ್ಯ ಸಿಬ್ಬಂದಿಗಳು ಲಸಿಕೆ ಪಡೆದಿರುವುದಿಲ್ಲ ಎಂದರು.

ತಾಲೂಕುವಾರು ಲಸಿಕೆ ವಿವರ: ಕಲಬುರಗಿಯ 8 ಕೇಂದ್ರಗಳಲ್ಲಿ- 369 ಸಿಬ್ಬಂದಿಗೆ, ಅಫಜಲಪುರ ತಾಲೂಕಿನ 5 ಕೇಂದ್ರದಲ್ಲಿ- 219, ಆಳಂದ ತಾಲೂಕಿನ 6 ಕೇಂದ್ರದಲ್ಲಿ- 180, ಸೇಡಂ ತಾಲೂಕಿನ 4 ಕೇಂದ್ರಗಳಲ್ಲಿ- 132, ಚಿತ್ತಾಪುರ ತಾಲೂಕಿನ 4 ಕೇಂದ್ರಗಳಲ್ಲಿ- 142, ಜೇವರ್ಗಿ ತಾಲೂಕಿನ 4 ಕೇಂದ್ರದಲ್ಲಿ- 147, ಚಿಂಚೋಳಿ ತಾಲೂಕಿನ 4 ಕೇಂದ್ರಗಳಲ್ಲಿ- 137 ಸೇರಿ ಒಟ್ಟು 1306 ಜನ ಆರೋಗ್ಯ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಲಸಿಕೆ ಪಡೆದ ನಂತರ ಆರೋಗ್ಯ ಸಿಬ್ಬಂದಿಗಳನ್ನು ತಜ್ಞ ವೈದ್ಯರನ್ನೊಳಗೊಂಡ ವೀಕ್ಷಣಾ ಕೊಠಡಿಯಲ್ಲಿ 30 ನಿಮಿಷಗಳ ಕಾಲ ನಿಗಾವಹಿಸಲಾಯಿತು ಎಂದು ತಿಳಿಸಿದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420