ಸಿದ್ಧರಾಮೇಶ್ವರ ಜಯಂತಿ ಆಚರಿಸದೇ ನಿರ್ಲಕ್ಷ್ಯತನ ತೋರಿದ ಬಿಜೆಪಿ ಅಧ್ಯಕ್ಷ ರಾಜೀನಾಮೆಗೆ ಒತ್ತಾಯ

0
21

ಶಹಾಬಾದ:ನಗರದ ಬಿಜೆಪಿ ಕಚೇರಿಯಲ್ಲಿ ಭೋವಿ ಸಮಾಜದ ಶರಣ ಸಿದ್ಧರಾಮೇಶ್ವರ ಜಯಂತೋತ್ಸವವನ್ನು ಆಚರಿಸದೇ ನಿರ್ಲಕ್ಷ್ಯತನ ತೋರಿದ ನಗರದ ಬಿಜೆಪಿ ಮಂಡಲ ಅಧ್ಯಕ್ಷ ಸಮಾಜಕ್ಕೆ ಬಹಿರಂಗವಾಗಿ ಕ್ಷಮಾಪಣೆ ಕೋರಬೇಕು. ಇಲ್ಲದಿದ್ದರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಭೋವಿ ಸಮಾಜದ ಅಧ್ಯಕ್ಷ ಭೀಮರಾವ ಸಾಳುಂಕೆ ಆಗ್ರಹಿಸಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಈ ಹಿಂದೆ ೨೦೦೮-೦೯ನೇ ಸಾಳಿನಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರೇ ಸಿದ್ಧರಾಮೇಶ್ವರ ಜಯಂತಿ ಆಚರಿಸಲು ಆದೇಶ ಮಾಡಿದ್ದರು. ಅಂದಿನಿಂದ ಇಂದಿನವರೆಗೆ ನಮ್ಮ ಬಿಜೆಪಿ ಪಕ್ಷದ ಕಚೇರಿಯಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಆದರೆ ಇದೇ ಮೊದಲ ಬಾರಿ ನಗರದ ಬಿಜೆಪಿ ಕಛೇರಿಯಲ್ಲಿ ಸಿದ್ಧರಾಮೇಶ್ವರ ಜಯಂತಿ ಆಚರಿಸದೇ ನಿರ್ಲಕ್ಷ್ಯ ತೋರಿದ್ದಾರೆ.ಅಲ್ಲದೇ ಗಮನಕ್ಕೂ ಬಂದರೂ ಜಯಂತಿ ಮಾಡದೇ ಕಡೆಗಣಿಸಲಾಗಿದೆ.ಇದೇನಾ ಶಿಸ್ತಿನ ಪಕ್ಷ ಎನ್ನುವುದು. ಇಲ್ಲಿ ಶಿಸ್ತು ಮಾಯವಾಗಿದೆ.ಈ ಘಟನೆಯಿಂದ ಭೋವಿ ಸಮಾಜದ ಬಾಂಧವರಿಗೆ ಎಲ್ಲಿಲ್ಲದ ನೋವುಂಟಾಗಿದೆ.ಅಲ್ಲದೇ ಈ ರೀತಿ ಎಂದಿಗೂ ಆಗಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Contact Your\'s Advertisement; 9902492681

ಈಗಾಗಲೇ ನಗರದ ಬಿಜೆಪಿಯಲ್ಲಿ ಭೋವಿ ಸಮಾಜದ ಸುಮಾರು ೯೦% ಜನರು ಪಕ್ಷದ ಸಂಘಟನೆಯಲ್ಲಿ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ.ಆದರೆ ನಮ್ಮ ಸಮಾಜದ ಗುರು ಶರಣ ಸಿದ್ಧರಾಮೇಶ್ವರರ ಜಯಂತಿ ಮಾಡದಿರುವುದಕ್ಕೆ ಸಮಾಜಕ್ಕೆ ಕ್ಷಮೆ ಕೋರಬೇಕು.ಇಲ್ಲವಾದಲ್ಲಿ ನೈತಿಕ ಹೊಣೆ ಹೊತ್ತು ನಗರದ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಆಗ್ರಹಿಸಿದಲ್ಲದೇ, ಈ ಕುರಿತು ಶಾಸಕರು, ಜಿಲ್ಲಾಧ್ಯಕ್ಷರು ಸೂಕ್ತ ಕ್ರಮಕೈಗೊಳ್ಳಬೇಕು.ಇಲ್ಲದಿದ್ದರೇ ನಗರದ ಭೋವಿ ಸಮಾಜದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಕಾರಣಕ್ಕೂ ಪಕ್ಷದ ಕಚೇರಿಯಲ್ಲಿ ಕಾಲಿಡುವುದಿಲ್ಲ. ಪಕ್ಷದ ಕಾರ್ಯಕ್ರಮಗಳಲ್ಲಿ, ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ. ಯಾವುದೇ ಕ್ರಮಕೈಗೊಳ್ಳದಿದ್ದಲ್ಲಿ ಮುಂದೆ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ನಗರಸಭೆ ಸದಸ್ಯೆ ಪಾರ್ವತಿ ಪವಾರ ಮಾತನಾಡಿ, ಭೋವಿ ಸಮಾಜದ ಬಗ್ಗೆ ನಿರ್ಲಕ್ಷ್ಯ ಧೋರಣೆ ಮಾಡಲಾಗುತ್ತಿದೆ.ಅಲ್ಲದೇ ಪಕ್ಷದ ನಗರಸಭೆ ಸದಸ್ಯರನ್ನು ಕಡೆಗಣಿಸಲಾಗುತ್ತಿದೆ.ಆದ್ದರಿಂದ ಕೂಡಲೇಬಿಜೆಪಿ ಮಂಡಲ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಭೋವಿ ಸಮಾಜದ ಉಪಾಧ್ಯಕ್ಷ ಅನೀಲ ಭೋರಗಾಂವಕರ್, ಪ್ರಧಾನ ಕಾರ್ಯದರ್ಶಿ ಸಂಜಯ ವಿಠಕರ್,ಅಂಬಣ್ಣ ಕುನ್ನೂರಕರ್, ಹಣಮಂತ ಕೇತ್ರೆ, ಮಹಾದೇವ ಗೋಡ್ಕೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here