ಶಹಾಬಾದ:ನಗರದ ಬಿಜೆಪಿ ಕಚೇರಿಯಲ್ಲಿ ಭೋವಿ ಸಮಾಜದ ಶರಣ ಸಿದ್ಧರಾಮೇಶ್ವರ ಜಯಂತೋತ್ಸವವನ್ನು ಆಚರಿಸದೇ ನಿರ್ಲಕ್ಷ್ಯತನ ತೋರಿದ ನಗರದ ಬಿಜೆಪಿ ಮಂಡಲ ಅಧ್ಯಕ್ಷ ಸಮಾಜಕ್ಕೆ ಬಹಿರಂಗವಾಗಿ ಕ್ಷಮಾಪಣೆ ಕೋರಬೇಕು. ಇಲ್ಲದಿದ್ದರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಭೋವಿ ಸಮಾಜದ ಅಧ್ಯಕ್ಷ ಭೀಮರಾವ ಸಾಳುಂಕೆ ಆಗ್ರಹಿಸಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಈ ಹಿಂದೆ ೨೦೦೮-೦೯ನೇ ಸಾಳಿನಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರೇ ಸಿದ್ಧರಾಮೇಶ್ವರ ಜಯಂತಿ ಆಚರಿಸಲು ಆದೇಶ ಮಾಡಿದ್ದರು. ಅಂದಿನಿಂದ ಇಂದಿನವರೆಗೆ ನಮ್ಮ ಬಿಜೆಪಿ ಪಕ್ಷದ ಕಚೇರಿಯಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಆದರೆ ಇದೇ ಮೊದಲ ಬಾರಿ ನಗರದ ಬಿಜೆಪಿ ಕಛೇರಿಯಲ್ಲಿ ಸಿದ್ಧರಾಮೇಶ್ವರ ಜಯಂತಿ ಆಚರಿಸದೇ ನಿರ್ಲಕ್ಷ್ಯ ತೋರಿದ್ದಾರೆ.ಅಲ್ಲದೇ ಗಮನಕ್ಕೂ ಬಂದರೂ ಜಯಂತಿ ಮಾಡದೇ ಕಡೆಗಣಿಸಲಾಗಿದೆ.ಇದೇನಾ ಶಿಸ್ತಿನ ಪಕ್ಷ ಎನ್ನುವುದು. ಇಲ್ಲಿ ಶಿಸ್ತು ಮಾಯವಾಗಿದೆ.ಈ ಘಟನೆಯಿಂದ ಭೋವಿ ಸಮಾಜದ ಬಾಂಧವರಿಗೆ ಎಲ್ಲಿಲ್ಲದ ನೋವುಂಟಾಗಿದೆ.ಅಲ್ಲದೇ ಈ ರೀತಿ ಎಂದಿಗೂ ಆಗಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ನಗರದ ಬಿಜೆಪಿಯಲ್ಲಿ ಭೋವಿ ಸಮಾಜದ ಸುಮಾರು ೯೦% ಜನರು ಪಕ್ಷದ ಸಂಘಟನೆಯಲ್ಲಿ ಕ್ರೀಯಾಶೀಲವಾಗಿ ಕೆಲಸ ಮಾಡುತ್ತಿದೆ.ಆದರೆ ನಮ್ಮ ಸಮಾಜದ ಗುರು ಶರಣ ಸಿದ್ಧರಾಮೇಶ್ವರರ ಜಯಂತಿ ಮಾಡದಿರುವುದಕ್ಕೆ ಸಮಾಜಕ್ಕೆ ಕ್ಷಮೆ ಕೋರಬೇಕು.ಇಲ್ಲವಾದಲ್ಲಿ ನೈತಿಕ ಹೊಣೆ ಹೊತ್ತು ನಗರದ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಆಗ್ರಹಿಸಿದಲ್ಲದೇ, ಈ ಕುರಿತು ಶಾಸಕರು, ಜಿಲ್ಲಾಧ್ಯಕ್ಷರು ಸೂಕ್ತ ಕ್ರಮಕೈಗೊಳ್ಳಬೇಕು.ಇಲ್ಲದಿದ್ದರೇ ನಗರದ ಭೋವಿ ಸಮಾಜದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಕಾರಣಕ್ಕೂ ಪಕ್ಷದ ಕಚೇರಿಯಲ್ಲಿ ಕಾಲಿಡುವುದಿಲ್ಲ. ಪಕ್ಷದ ಕಾರ್ಯಕ್ರಮಗಳಲ್ಲಿ, ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ. ಯಾವುದೇ ಕ್ರಮಕೈಗೊಳ್ಳದಿದ್ದಲ್ಲಿ ಮುಂದೆ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.
ನಗರಸಭೆ ಸದಸ್ಯೆ ಪಾರ್ವತಿ ಪವಾರ ಮಾತನಾಡಿ, ಭೋವಿ ಸಮಾಜದ ಬಗ್ಗೆ ನಿರ್ಲಕ್ಷ್ಯ ಧೋರಣೆ ಮಾಡಲಾಗುತ್ತಿದೆ.ಅಲ್ಲದೇ ಪಕ್ಷದ ನಗರಸಭೆ ಸದಸ್ಯರನ್ನು ಕಡೆಗಣಿಸಲಾಗುತ್ತಿದೆ.ಆದ್ದರಿಂದ ಕೂಡಲೇಬಿಜೆಪಿ ಮಂಡಲ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಭೋವಿ ಸಮಾಜದ ಉಪಾಧ್ಯಕ್ಷ ಅನೀಲ ಭೋರಗಾಂವಕರ್, ಪ್ರಧಾನ ಕಾರ್ಯದರ್ಶಿ ಸಂಜಯ ವಿಠಕರ್,ಅಂಬಣ್ಣ ಕುನ್ನೂರಕರ್, ಹಣಮಂತ ಕೇತ್ರೆ, ಮಹಾದೇವ ಗೋಡ್ಕೆ ಇತರರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…