ಬಡ ವಿದ್ಯಾರ್ಥಿಗಳಿಗೆ ಶಾಸಕ ದರ್ಶನಾಪುರವರಿಂದ ಮೊಬೈಲ್ ಟ್ಯಾಬ್ ವಿತರಣೆ

0
23

ಶಹಾಪುರ : ಬಡ ಮಕ್ಕಳ ಕಲಿಕೆಯ ಹಿತದೃಷ್ಟಿಯಿಂದ ಅಭ್ಯಾಸದ ಜೊತೆಗೆ ಕಲಿಕೆಯಲ್ಲಿ ಯಾರೂ ಹಿಂದುಳಿಯಬಾರದು ಎಂಬ ಸದುದ್ದೇಶದಿಂದ ಇಂದು ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ವಿದ್ಯಾರ್ಥಿಗಳಿಗೆ ಮೊಬೈಲ್ ಟ್ಯಾಬ್ ವಿತರಿಸಿದರು.

ತಾಲ್ಲೂಕಿನ ಚಾಮನಾಳ ಗ್ರಾಮದ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇಂದು ಪಬ್ಲಿಕ್ ಟಿವಿ ನಡೆಸಿರುವ ಆಂದೋಲನದಲ್ಲಿ ಬಡಮಕ್ಕಳ ಕಲಿಕೆಯ ಹಿತದೃಷ್ಟಿಯಿಂದ 48 ಮೊಬೈಲ್ ಟ್ಯಾಬ್ ವಿತರಿಸಿ ಮಾತನಾಡಿದರು.

Contact Your\'s Advertisement; 9902492681

ವಿದ್ಯಾರ್ಥಿಗಳು ಕಾಲಹರಣ ಮಾಡದೆ ಇದರ ಸದುಪಯೋಗ ಪಡಿಸಿಕೊಂಡು ನಿರಂತರವಾಗಿ ಅಧ್ಯಯನ ಮಾಡಿ ಜೀವನದಲ್ಲಿ ಯಶಸ್ಸು ಕಾಣಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ ಸುದ್ದಿ ವಾಹಿನಿಯ ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here