ಕೋವಿಡ್ ಕುರಿತು ಶ್ರೀಪ್ರಭು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಸೆಮಿನಾರ 29ಕ್ಕೆ

ಸುರಪುರ: ಇದೇ ಜನೆವರಿ ೨೯ ರಂದು ಶ್ರೀ ಪ್ರಭು ಮಹಾ ವಿದ್ಯಾಲಯದ ವತಿಯಿಂದ ಒಂದು ದಿನದ ಅಂತರಾಷ್ಟ್ರೀಯ ವೆಬಿನಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಭು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಸ್.ಹೆಚ್.ಹೊಸಮನಿ ತಿಳಿಸಿದರು.

ನಗರದ ಶ್ರೀ ಪ್ರಭು ಮಹಾ ವಿದ್ಯಾಲಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಮ್ಮ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವೈಜನಾಥ ವರ್ಮಾ ಅವರು ಕೊವೀಡ್ ೧೯ ಕುರಿತು ಸಂಶೋಧನೆ ನಡೆಸಿ ಅದರ ಪ್ರೋಟೀಸ್ ಬಗ್ಗೆ ಬರೆದ ವರದಿಯನ್ನು ಅಂತರಾಷ್ಟ್ರೀಯ ಮಟ್ಟದ ಜರನಲ್ ಆಫ್ ಮೋಲಿಕ್ಯೊಲರ್ ಸ್ಟಕರ್ಚಸ್ ಎಲ್ಸವೇರ ಪತ್ರಿಕೆಯಲ್ಲಿ ಲೇಖನ ಪ್ರಕಟವಾಗಿತ್ತು, ಈ ಲೇಖನವನ್ನು ವಿಶ್ವ ಆರೋಗ್ಯ ಸಂಸ್ಥೆಯವರು ಪರಿಗಣಿಸಿ ಪ್ರಶಂಸೆ ವ್ಯಕ್ತಪಡಿಸಿ ಸಂಸ್ಥೆಯ ಅಂರ್ತಜಾಲದಲ್ಲಿ ಅದನ್ನು ಪ್ರಕಟಿಸಿರುತ್ತಾರೆ.

ಅಲ್ಲದೆ ಅದೇ ಲೇಖನ ಇನ್ನೂ ಅನೇಕ ಅಂತರಾಷ್ಟ್ರೀಯ ಮಟ್ಟದ ಪತ್ರಿಕೆಗಳಲ್ಲಿ ಲೇಖನ ಪ್ರಕಟವಾಗಿದೆ.ಆದ್ದರಿಂದ ಈ ಕುರಿತು ವೈಜನಾಥ ವರ್ಮಾರ ಕೋವಿಡ್ ಸಂಶೋಧನೆಯ ಕುರಿತು ಹೆಚ್ಚಿನ ಸಂಶೋಧನೆಗೆ ಹಾಗು ನಮ್ಮ ಭಾಗದ ವಿದ್ಯಾರ್ಥಿಗಳಿಗೆ ರಸಾಯನಶಾಸ್ತ್ರ ಹಾಗು ಜೀವಶಾಸ್ತ್ರಗಳ ಕುರಿತು ತಜ್ಞರ ಉಪನ್ಯಾಸದ ಮೂಲಕ ಪ್ರೇರೆಪಿಸಲು ಮತ್ತು ಕೋವಿಡ್ ಕುರಿತು ಜನರಿಗೆ ಅರಿವು ಮೂಡಿಸಲು ಅಂತರಾಷ್ಟ್ರೀಯ ಮಟ್ಟದ ವೆಬಿನಾರನ್ನು ಹಮ್ಮಿಕೊಳ್ಳಲಾಗಿz, ಈ ವೆಬಿನಾರ ನಲ್ಲಿ ಮೆಡಿಸಿನ್ ಕುರಿತು ಉಪನ್ಯಾಸವನ್ನು ಅಂತರಾಷ್ಟ್ರೀಯ ವಿಜ್ಞಾನಿಯಾದ ಡಾ. ಅನೀಲ ಕುಮಾರ, ಡಾ, ಪ್ರಕಾಶ ವಾಡಗಾಂವ್‌ಕರ್ ಅವರುಗಳು ಉಪನ್ಯಾಸ ನೀಡಲಿದ್ದಾರೆ ಮತ್ತು ಕ್ಯಾನ್ಸರ್ ಕುರಿತು ಡಾ.ಪ್ರಭಂಜನ್ ಎಸ್.ಜಿ ಅವರು ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಈ ವೆಬಿನಾರ https//forms.gle/M2dNxsJQjoaDe5q77 ಲಿಂಕನಲ್ಲಿ ನೊಂದಾಯಿಸಿಕೊಂಡು ವೆಬಿನಾರನಲ್ಲಿ ಭಾಗವಹಿಸಿ ಉಪನ್ಯಾಸವನ್ನು ಕೇಳಲು ಅನುಮತಿಸಲಾಗಿದೆ ಹಾಗೂ ಫೀಡಬ್ಯಾಕ್ ಪಡೆದವರು ಯುಟೂಬ್, ಗೋಗಲ್‌ಮೀಟ್‌ನಲ್ಲೂ ಕಾರ್ಯಕ್ರಮವನ್ನು ವಿಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾದ ವೇಣುಗೋಪಾಲ ಜೇವರ್ಗಿಯವರು ಮಾತನಾಡಿದರು, ಎಮ್.ಡಿ.ವಾರಿಸ್, ಸಾಯಬಣ್ಣ ಮುಡಬೂಳ ಸೇರಿದಂತೆ ಅನೇಕ ಜನ ಉಪನ್ಯಾಸಕರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420