ಬೆಳಗಾವಿಯಲ್ಲಿ ಕನ್ನಡಿಗರಾಗಿ ಪರಿವರ್ತನೆ ಹೊಂದಿದÀವರ ಸಾಮಾಜಿಕ ಸಮೀಕ್ಷೆ: ಟಿ.ಎಸ್.ನಾಗಾಭರಣ

ಕಲಬುರಗಿ: ಬೆಳಗಾವಿಯಲ್ಲಿ ಮರಾಠಿ ಭಾಷೆ ಮಾತನಾಡುವವರು ಈವರೆಗೆ ಕನ್ನಡಿಗರಾಗಿ ಪರಿವರ್ತನೆಯಾಗಿರುವುದರ ಬಗ್ಗೆ ಸಾಮಾಜಿಕ ಸಮೀಕ್ಷೆ ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಘೋಷಿಸಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸ, ಐತಿಹ್ಯ ಹಾಗೂ ಈಗಿನ ಕಾಲಘಟ್ಟದ ಬಗ್ಗೆಯೂ ತಿಳಿಯಬೇಕಿದೆ ಎಂದು ಪ್ರತಿಪಾದಿಸಿದರು. ರಾಜ್ಯ ವಿಂಗಡಣೆಯಾಗಿ 65 ವರ್ಷಗಳಾದರೂ ಇನ್ನೂ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಹೊರ ರಾಜ್ಯದದಿಂದ ಕರ್ನಾಟಕಕ್ಕೆ ಬಂದ ಸರ್ಕಾರಿ ಅಧಿಕಾರಿಗಳಿಗೆ, ಕನ್ನಡ ಭಾಷೆ ಕಲಿಕೆ ಬಗ್ಗೆ 4 ಹಂತಗಳಲ್ಲಿ ಭಾಷೆಯನ್ನು ಕಲಿಯಲು ಅವಕಾಶ ನೀಡಲಾಗುತ್ತದೆ. ಹಂತ-ಹಂತವಾಗಿ ಕನ್ನಡ ಭಾಷೆಯನ್ನು ಕಲಿಯಲು ಕಡ್ಡಾಯವಾಗಿ ನಿಯಮಗಳಿವೆ ಎಂದು ನಾಗಾಭರಣ ಹೇಳಿದರು.

ರಾಜ್ಯದ ಗಡಿ ಭಾಗದಿಂದ 1ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಉದ್ಯೋಗಾವಕಾಶದಲ್ಲಿ ಸರ್ಕಾರವು ಶೇ.5ರಷ್ಟು ಮೀಸಲಾತಿ ನೀಡುತ್ತದೆ. ಇದರಿಂದ ಕನ್ನಡಿಗರಿಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು.

ಕನ್ನಡ ಭಾಷೆ ಅನುಷ್ಠಾನದಲ್ಲಿ ಜಿಲ್ಲಾಡಳಿತದಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ನಾಗಾಭರಣ ಅವರು ಕೃತಜ್ಞತೆ ಹೇಳಿದರು. ಅಲ್ಲದೇ ಕನ್ನಡ ಭಾಷೆ ಯಶಸ್ವಿಯಾಗಿ ಅನುಷ್ಠಾನಗೊಳ್ಳಲು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳುವುದಾಗಿ ತಿಳಿಸಿದರು.

ಕನ್ನಡ ಭಾಷಾ ಚಟುವಟಿಕೆಗಳ ಮೂಲಕ ಕನ್ನಡ ಕಾಯಕ ವರ್ಷ ಅನುಷ್ಠಾನದ ಅಗತ್ಯವಿದೆ. ಕನ್ನಡ ಭಾಷೆ ಇನ್ನಷ್ಟು ಗಟ್ಟಿಯಾಗಿ ಕಟ್ಟಲು ಸಾಕಷ್ಟು ಹಂತಗಳ ಕಾರ್ಯ ಯೋಜನೆ ರೂಪಿಸಿಕೊಳ್ಳಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸುರೇಶ ಬಡಿಗೇರ, ಕಾರ್ಯದರ್ಶಿ ಡಾ.ಮುರಳೀಧರ ಹಾಗೂ ಆಪ್ತ ಕಾರ್ಯದರ್ಶಿ ಡಾ. ವೀರಶೆಟ್ಟಿ ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420